ಸಚಿವರ ಮನೆ ಮುಂದೆ ರೌಡಿ ಶೀಟರ್ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ : ಆರೋಪಿ ಅರೆಸ್ಟ್

ಬೆಂಗಳೂರು : (Bengaluru Attempt to Murder) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆನೇ ಭಯಾನಕ ಘಟನೆಯೊಂದು ನಡೆದಿದ್ದು, ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆಯೇ ರೌಡಿಶೀಟರ್‌ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ ನಡೆದಿದೆ. ಸದ್ಯ ಗಾಯಾಳು ರೌಡಿಶೀಟರ್‌ ಅನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಂತ್ರಸ್ತನ ಸ್ಥಿತಿ ಚಿಂತಾಜನಕವಾಗಿದೆ.

ಮಾರ್ಚ್‌ 21 ರಂದು ಬೆಳಿಗ್ಗೆ ಸುಮಾರು 5 ರಿಂದ 6 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಶಶಿಕಲಾ ಜೊಲ್ಲೆ ಮನೆ ಮುಂದಯೇ ಕಿಡಿಗೇಡಿಗಳು ತನ್ನ ಸ್ನೇಹಿತನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನ ನಡೆಸಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾರೆ.

ಬಿಬಿಎಂಪಿ ಟ್ಯಾಕ್ಸ್ ಕಲೆಕ್ಟರ್ ಆಗಿರುವ ಸುನೀಲ್ ಕುಮಾರ್ ಹಾಗೂ ಗಗನ್ ನಡುವೆ ಆಸ್ತಿ ವಿಚಾರಕ್ಕಾಗಿ ಮನಸ್ತಾಪವಾಗಿತ್ತು. ಹೀಗಾಗಿ ಸುನೀತ್ ಮಾತನಾಡಬೇಕು ಎಂದು ಮಾರ್ಚ್ 20 ರಂದು ರಾತ್ರಿ 10 ಗಂಟೆಗೆ ಗಗನ್​ಗೆ ಕಾಲ್ ಮಾಡಿ ಫ್ರೇಜರ್ ಟೌನ್​ಗೆ ಕರೆಸಿಕೊಂಡಿದ್ದ. ಬಳಿಕ ಅಲ್ಲಿಂದ ಕಾರಿನಲ್ಲಿ ಕೂರಿಸಿಕೊಂಡು ಸಿಟಿ ರೌಂಡ್ಸ್ ಹೊಡೆದು ಮಾರ್ಚ್ 21 ರ ಬೆಳಗ್ಗೆ ಜಯಮಹಲ್ ರಸ್ತೆ ಬಳಿ ಬಂದು ಕಾರು ನಿಲ್ಲಿಸಿದ್ದ. ಕಾರಿನಲ್ಲಿ ನಾಲ್ವರಿದ್ದು, ಒಟ್ಟಿಗೆ ಸಿಟಿಯನ್ನು ರೌಂಡ್‌ ಹಾಕಿದ್ದರು.

ಇದನ್ನೂ ಓದಿ : ಸರಕಾರಿ ಬಸ್ ಕಾರಿಗೆ ಢಿಕ್ಕಿ : 3 ಸಾವು, 9 ಮಂದಿಗೆ ಗಾಯ

ಆದರೆ ಸುತ್ತಾಡುವ ವೇಳೆ ಗಲಾಟೆ ನಡೆದಿದ್ದು, ಸುನೀಲ್‌ ಸೇರಿ ಮೂವರು ಗಗನ್‌ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಕಾರಿನಿಂದ ಕೆಳಗೆ ತಳ್ಳಿ ಮೂರು ನಾಲ್ಕು ಬಾರಿ ಕಾರು ಹತ್ತಿಸಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇದೀಗ ಘಟನೆಯ ಸಂಬಂಧ ಜೆಸಿ ನಗರ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಸುನೀಲ್‌ ನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

Bengaluru Attempt to Murder: Rowdy Sheeter was rammed by car in front of minister’s house: Accused arrested

Comments are closed.