Bengaluru Fire accident: ಕಾರ್‌ ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ: ಕೋಟ್ಯಾಂತರ ರೂ ಮೌಲ್ಯದ ಕಾರ್‌ಗಳು ಭಸ್ಮ

ಬೆಂಗಳೂರು: (Bengaluru Fire accident) ಕಾರು ಗ್ಯಾರೇಜ್‌ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ ಮೌಲ್ಯದ ಐಷಾರಾಮಿ ಕಾರುಗಳು ಬೆಂಕಿಗಾಹುತಿಯಾದ ಘಟನೆ ತಡರಾತ್ರಿ ಬೆಂಗಳೂರಿನ ರಾಮಮೂರ್ತಿನಗರದ ಕಸ್ತೂರಿನಗರದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಹತ್ತಕ್ಕೂ ಅಧಿಕ ಕಾರುಗಳು ಸುಟ್ಟು ಕರಕಲಾಗಿವೆ.

ರಾಮಮೂರ್ತಿನಗರದ ಕಸ್ತೂರಿನಗರದಲ್ಲಿರುವ ಚಾಂದ್‌ ಪಾಷ ಎನ್ನುವವರಿಗೆ ಸೇರಿದ ಗ್ಯಾರೇಜ್‌ ನಲ್ಲಿ ಈ ಘಟನೆ ಸಂಭವಿಸಿದ್ದು, ಕೋಟ್ಯಾಂತರ ರೂ ಮೌಲ್ಯದ ಕಾರುಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐದಕ್ಕೂ ಅಧಿಕ ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ.

ಗ್ಯಾರೇಜ್‌ ನಲ್ಲಿ ಸ್ಟಾಟರ್‌ ಕೆಲಸ ಮಾಡುವಾಗ ಬೆಂಕಿಯ ಕಿಡಿ ಹಾರಿ ಬೆಂಕಿ ಅನಾಹುತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಅಗ್ನಿ ಅನಾಹುತಕ್ಕೆ ನಿಖರವಾದ ಕಾರಣಗಳು ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಘಟನೆಯ ಬಗ್ಗೆ ಕಸ್ತೂರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ : Drinking contaminated water-dead: ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಗ್ರಾಮಕ್ಕೆ ನೀರು ಪೂರೈಸುವ ಪೈಪ್‌ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿದ್ದು, ಇದನ್ನು ಕುಡಿದ ಜನರಲ್ಲಿ ವಾಂತಿ, ಭೇಧಿ ಕಾಣಿಸಿಕೊಂಡಿದೆ. ಇಬ್ಬರು ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದರೆ 40 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಸ್ವಸ್ಥಗೊಂಡವರನ್ನು ಯಾದಗಿರಿಯ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : Drug sales case: ಮಣಿಪಾಲ: ಮಾದಕ ವಸ್ತು ಮಾರಾಟ: ಇಬ್ಬರು ವಿದ್ಯಾರ್ಥಿಗಳ ಅಮಾನತು

ಇದನ್ನೂ ಓದಿ : Black Hawk Helicopter Crash: ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಪತನ: 2 ಸಿಬ್ಬಂದಿ ಸಾವು

Bengaluru Fire accident: Fire accident in a car garage: Cars worth crores of rupees burnt

Comments are closed.