ಭಾನುವಾರ, ಏಪ್ರಿಲ್ 27, 2025
HomeCrimeಬಿಜೆಪಿ ಮುಖಂಡನ ಕೊಲೆ ಆರೋಪಿಗೆ ಶೂಟೌಟ್ : ಗುಂಡಿಕ್ಕಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ಬಿಜೆಪಿ ಮುಖಂಡನ ಕೊಲೆ ಆರೋಪಿಗೆ ಶೂಟೌಟ್ : ಗುಂಡಿಕ್ಕಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

- Advertisement -

ಸುಳ್ಯ : ಬೆಳ್ಳಂಬೆಳಗ್ಗೆಯೇ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಗುಂಡಿಕ್ಕಿ ಬಿಜೆಪಿ ಮುಖಂಡನೋರ್ವನನ್ನು ಕೊಲೆ ಮಾಡಿದ್ದ ಆರೋಪಿಯನ್ನು ಹತ್ಯೆ ಮಾಡಲಾಗಿದ್ದು, ಅಪರಿಚಿತ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಶಾಂತಿನಗರದಲ್ಲಿ ಈ ಘಟನೆ ನಡೆದಿದ್ದು, ಸಂಪತ್ ಕಲ್ಲುಗುಂಡಿ ಎಂಬಾತನೇ ಕೊಲೆಯಾಗಿರುವ ವ್ಯಕ್ತಿ. ಸಂಪತ್ ಬಿಜೆಪಿ ಮುಖಂಡ ಬಾಲಚಂದ್ರ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಸಂಪತ್ ಕಲ್ಲುಗುಂಡಿ ತನ್ ಮನೆಯಿಂದ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ಕಾರಿನ ಗ್ಲಾಸಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಪೌಂಡ್ ಗೆ ತಾಗಿ ನಿಂತಿದೆ. ಅಲ್ಲಿಂದ ತಪ್ಪಿಸಿಕೊಂಡ ಸಂಪತ್ ಪಕ್ಕದಲ್ಲಿದ್ದ ಕಾಂತಪ್ಪ ಎಂಬವರ ಮನೆಗೆ ಓಡಿ ಹೋಗಿದ್ದಾರೆ. ದುಷ್ಕರ್ಮಿಗಳು ಸಂಪತ್ ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮತ್ತೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಗುಂಡೇಟಿನಿಂದಾಗಿ ಸಂಪತ್ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸ್.ಐ.ಹರೀಶ್ ಎಂ.ಆರ್ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯಾ ಇಲ್ಲಾ ಬೇರಾವುದೇ ಕಾರಣಕ್ಕೆ ಹತ್ಯೆ ನಡೆದಿದೆಯೋ ಅನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular