Bus Lorry Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಬಸ್‌ -ಲಾರಿ ಢಿಕ್ಕಿ, 9 ಸಾವು, 24 ಮಂದಿಗೆ ಗಾಯ

ಧಾರವಾಡ : ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ(Bus Lorry Accident ) 9 ಮಂದಿ ಸಾವನ್ನಪ್ಪಿ, 24 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಹೊರವಲಯದ ತಾರಿಹಾಳದಲ್ಲಿ ನಡೆದಿದೆ. ಅಪಘಾತದಲ್ಲಿ 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಕ್ಕಿ ಚೀಲ ತುಂಬಿಸಿಕೊಂಡು ಧಾರವಾಡದ ಕಡೆಗೆ ಹೊರಟಿದ್ದ ಲಾರಿ, ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಖಾಸಗಿ ಬಸ್‌ ಮುಖಾಮುಖಿಯಾಗಿ ಢಿಕ್ಕಿಯಾಗಿವೆ. ಅಪಘಾತ ನಡೆಯುತ್ತಿದ್ದಂತೆಯೇ ಲಾರಿ ಚಾಲಕ, ಕ್ಲೀನರ್‌ ಸೇರಿದಂತೆ ಒಟ್ಟಿ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರದವರಾಗಿದ್ದು, ಗಾಯಾಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲಾರಿ ಚಾಲಕ ಎದುರಿನಲ್ಲಿ ಸಂಚರಿಸುತ್ತಿದ್ದ ಟ್ರ್ಯಾಕ್ಟರ್‌ ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಲಾರಿ ಢಿಕ್ಕಿಯಾಗಿದೆ. ಲಾರಿ ಚಾಲಕನ ಅಜಾಗರೂಕತೆ ಯಿಂದಲೇ ಈ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : Harshal Patel injured : ಆರ್‌ಸಿಬಿ ತಂಡಕ್ಕೆ ಬಿಗ್‌ ಶಾಕ್‌ : ಖ್ಯಾತ ಬೌಲರ್‌ ಹರ್ಷಲ್‌ ಪಟೇಲ್‌ಗೆ ಗಾಯ

ಇದನ್ನು ಓದಿ : young woman raped : ತಲೆಗೆ ಗನ್​ಪಾಯಿಂಟ್​ ಇಟ್ಟು ಯುವತಿ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ

Bus Lorry Accident Hubballi Karnataka: 9 Killed, 26 Injured

Comments are closed.