Crime News : ಕೋಳಿ ಅಂಕಕ್ಕೆ ಪೊಲೀಸರ ದಾಳಿ : ನಾಲ್ವರ ಬಂಧನ, ಕೋಳಿಗಳು ವಶಕ್ಕೆ

ಮಂಗಳೂರು : ಹಣವನ್ನು ಪಣವಾಗಿಟ್ಟುಕೊಂಡು ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿ, ಕೋಳಿಗಳನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಹೊರವಲಯದ ಪದವು ಗ್ರಾಮದ ಮುಗ್ರೋಡಿ ಕಟ್ಟೆಪುಣಿ ಎಂಬಲ್ಲಿ ನಡೆದಿದೆ.

ದೀಪಕ್‌, ಕೃಷ್ಣಪ್ಪ, ವಿಶ್ವನಾಥ್‌, ಶಿವಪ್ರಸಾದ್‌ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕೋಳಿ ಅಂಕದ ಮೇಲೆ ಕಂಕನಾಡಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆಯಲ್ಲಿ ಹಣವನ್ನು ಪಣಕ್ಕಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವುದು ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ನಗದು ಹಾಗೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಕಂಕನಾಡಿ ಠಾಣೆಯ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

Comments are closed.