Crane collapsed-4 death: ತಮಿಳುನಾಡಿನಲ್ಲಿ ಕ್ರೇನ್‌ ಕುಸಿದು ನಾಲ್ವರು ದುರ್ಮರಣ : 9 ಮಂದಿಗೆ ಗಾಯ

ತಮಿಳುನಾಡು: (Crane collapsed-4 death) ದೇವಸ್ಥಾನದ ಉತ್ಸವ ನಡೆಯುತ್ತಿದ್ದ ವೇಳೆಯಲ್ಲಿ ಕ್ರೇನ್‌ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಅರಕ್ಕೋಣಂ ದೇವಸ್ಥಾನದಲ್ಲಿ ನಡೆದಿದೆ. ಘಟನೆಯಲ್ಲಿ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಕ್ಕೋಣಂ ದೇವಸ್ಥಾನದಲ್ಲಿ ಉತ್ಸವ ನಡೆಯುತ್ತಿದ್ದು, ಹಲವರು ಸೇರಿದ್ದರು. ಈ ವೇಳೆ ಅನುಮತಿ ಇಲ್ಲದೇ ಉತ್ಸವದಲ್ಲಿ ಕ್ರೇನ್‌ ಬಳಸಿದ್ದು, ದುರಂತಕ್ಕೆ ಕಾರಣವಾಗಿದೆ. ಉತ್ಸವ ನಡೆಯುತ್ತಿರುವ ಸಮಯದಲ್ಲಿ ಕ್ರೇನ್‌ ಕುಸಿದು ಬಿದ್ದು, ನಾಲ್ವರು (Crane collapsed-4 death) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಒಂಬತ್ತು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅನುಮತಿಯಿಲ್ಲದೇ ಉತ್ಸವದ ಸಂದರ್ಭದಲ್ಲಿ ಕ್ರೇನ್‌ ಬಳಸಿದ್ದು ಕ್ರೇನ್‌ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಲಾರಿಗೆ ಕಾರು ಡಿಕ್ಕಿ: 5 ಮಂದಿ ಸಾವು

ಅಂಬಲಪುಳ: ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಆಲಪ್ಪುಳ ಜಿಲ್ಲೆಯ ಅಂಬಲಪ್ಪುಳ ಬಳಿ ನಡೆದಿದೆ. ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಆಲಪ್ಪುಳ ಜಿಲ್ಲೆಯ ಅಂಬಲಪ್ಪುಳ ಬಳಿ ತಿರುವನಂತಪುರಂ ಕಡೆಗೆ ಹೋಗುತ್ತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ಇವರಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ನಕಲಿ ಮದ್ಯ ಸೇವನೆ : 3 ಸಾವು, 6 ಮಂದಿ ಆಸ್ಪತ್ರೆಗೆ ದಾಖಲು

ಇದನ್ನೂ ಓದಿ : Murder case- body cut into pieces: ಪತ್ನಿಯ ಪ್ರಿಯಕರನ ಕೊಲೆ: ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಕಾಲೋನಿಯಲ್ಲಿ ಎಸೆದ ಪತಿ

ಇದನ್ನೂ ಓದಿ : Shraddha Walker murder case: 3,000 ಪುಟಗಳ ಚಾರ್ಜ್‌ಶೀಟ್‌ ಸಿದ್ದಪಡಿಸಿದ ದೆಹಲಿ ಪೊಲೀಸರು

ಘಟನೆಯ ನಂತರ ಅಂಬಲಪುಳ ಪೊಲೀಸರು ಸ್ಥಳಕ್ಕೆ ಧಾವಿಸಿ ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾನೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಘಟನೆಯ ಕುರಿತು ಅಂಬಲಪುಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crane collapsed-4 dead: Four dead after crane collapsed in Tamilnadu: 9 injured

Comments are closed.