Davanagere bike accident: ಅಪರಿಚಿತ ವಾಹನಕ್ಕೆ ಬೈಕ್‌ ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: (Davanagere bike accident) ಅಪರಿಚಿತ ವಾಹನವೊಂದು ಬೈಕ್‌ ಗೆ ಢಿಕ್ಕಿಯಾದ ಪರಿಣಾಮ ಒಂದೇ ಬೈಕ್‌ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಆನಗೋಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಮನಗರದ ನಿವಾಸಿಗಳಾದ ಪರಶುರಾಮ್‌ (24 ವರ್ಷ), ಸಂದೇಶ (23 ವರ್ಷ), ಶಿವು (26 ವರ್ಷ) ಮೃತ ದುರ್ದೈವಿಗಳು.

ದಾವಣಗೆರೆಯ ಕಾಟಿಹಳ್ಳಿ ಗ್ರಾಮದಲ್ಲಿ ದೇವಿ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಮೂವರು ಯುವಕರು ಒಂದೇ ಬೈಕ್‌ ನಲ್ಲಿ ತೆರಳಿದ್ದರು. ಅಲ್ಲಿ ದೇವಿ ಕಾರ್ಯಕ್ರಮದಲ್ಲಿ ಊಟ ಮಾಡಿ ಸ್ವಲ್ಪ ಹೊತ್ತು ಅಲ್ಲೇ ಕಾಲ ಕಳೆದು ತಡರಾತ್ರಿ ಬೈಕ್‌ ಮನೆಗೆ ವಾಪಾಸ್‌ ಹಿಂತಿರುಗುತ್ತಿದ್ದರು. ಈ ವೇಳೆ ಆನಗೋಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಬೈಕ್‌ ಗೆ ಢಿಕ್ಕಿಯಾಗಿದೆ. ಢಿಕ್ಕಿ ಹೊಡೆದು ವಾಹನ ನಿಲ್ಲಿಸದೇ ಸ್ಥಳದಿಂದ ತೆರಳಿದೆ. ಕಾಟಿಪಳ್ಳಿ ದೇವಿ ಉತ್ಸವದಲ್ಲಿ ಊಟ ಮಾಡಿ ವಾಪಾಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ವಾಹನ ಬೈಕ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿ ಸಾಗುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : PU Student died: ಆಸೆಯಿಂದ ಪರೋಟ ತಿಂದ ಪಿಯು ವಿದ್ಯಾರ್ಥಿನಿಯ ಬದುಕು ಅಂತ್ಯ

ಕರೋಲ್‌ ಬಾಗ್‌ ನಲ್ಲಿರುವ ಬ್ಯಾಂಕ್‌ ಶಾಖೆಯಲ್ಲಿ ಅಗ್ನಿ ಅವಘಡ

ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯಲ್ಲಿ ಶನಿವಾರ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 17 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಅಗ್ನಿ ಅ‍ವಘಡ ಸಂಭವಿಸಲು ನಿಖರ ಕಾರಣಗಳೇನು ಎಂಬುದು ಸದ್ಯದ ಮಟ್ಟಿಗೆ ತಿಳಿದುಬಂದಿಲ್ಲ.

ಇದನ್ನೂ ಓದಿ : Udupi drug case: ಉಡುಪಿ : ಗಾಂಜಾ ಸೇವನೆ ಪ್ರಕರಣ, ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್‌

ಇದನ್ನೂ ಓದಿ : Death of a child: ಮೌಢಕ್ಕೆ ಒಂದು ವರ್ಷದ ಮಗು ಬಲಿ : ಅನಾರೋಗ್ಯ ಪೀಡಿತ ಮಗುವಿನ ಹಲ್ಲು ಕಿತ್ತು ನೆಲಕ್ಕೆ ಎಸೆದ ಮಂತ್ರವಾದಿ

Davanagere bike accident: Bike collided with an unknown vehicle: Three died on the spot

Comments are closed.