Deadly attack on Hindu youth : ಶಿವಮೊಗ್ಗ ಚಾಕು ಇರಿತ ಪ್ರಕರಣ ಬೆನ್ನಲ್ಲೇ ಭದ್ರಾವತಿಯಲ್ಲಿ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ : Deadly attack on Hindu youth : ರಾಜ್ಯದಲ್ಲಿ ಕೋಮುವಾದದ ಸಂಘರ್ಷಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣ ಮಾಸುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್​ ನೆಟ್ಟಾರು ಹತ್ಯೆ ನಡೆದಿತ್ತು, ಇದೀಗ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ವೀರ ಸಾವರ್ಕರ್​ ಫೋಟೋ ವಿಚಾರವಾಗಿ ಶಿವಮೊಗ್ಗ ನಗರ ರಣಾರಂಗವಾಗಿ ಬದಲಾಗಿದ್ದು ಇಬ್ಬರು ಯುವಕರ ಮೇಲೆ ಚಾಕು ಇರಿತವಾದ ಪ್ರಕರಣ ನಿನ್ನೆ ಬೆಳಕಿಗೆ ಬಂದಿತ್ತು. ಈ ಎಲ್ಲದರ ನಡುವೆಯೇ ಇದೀಗ ಭದ್ರಾವತಿಯಲ್ಲಿ ಭಜರಂಗದಳಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.


ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ನಿನ್ನೆ ಶಿವಮೊಗ್ಗ ನಗರದಲ್ಲಿ ಹಿಂದೂ ಕಾರ್ಯಕರ್ತರು ವೀರ ಸಾವರ್ಕರ್​ ಫ್ಲೆಕ್ಸ್​ನ್ನು ಅಳವಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮುಸ್ಲಿಂ ಯುವಕರು ವೀರ ಸಾವರ್ಕರ್​ ಜಾಗದಲ್ಲಿ ಟಿಪ್ಪು ಸುಲ್ತಾನನ ಫೋಟೋ ಇರಬೇಕೆಂದು ಆಗ್ರಹಿಸಿದ್ದರು. ಇದರಿಂದಾಗಿ ಶಿವಮೊಗ್ಗದಲ್ಲಿ ಉಂಟಾದ ಗಲಾಟೆಯು ಸೆಕ್ಷನ್​ 144 ಜಾರಿ ಮಾಡುವಂತೆ ಮಾಡಿತ್ತು.


ನಿಷೇಧಾಜ್ಞೆ ಜಾರಿಯಾಗುತ್ತಿದ್ದಂತೆಯೇ ಶಿವಮೊಗ್ಗ ನಗರದಲ್ಲಿಯೇ ಅಂಗಡಿಗಳನ್ನು ಹೊಂದಿದ್ದ ಪ್ರೇಮ್​ ಸಿಂಗ್​ ಹಾಗೂ ಪ್ರವೀಣ್​ ಕುಮಾರ್​ ಎಂಬವರು ತಮ್ಮ ತಮ್ಮ ಅಂಗಡಿಗಳನ್ನು ಬಂದ್​ ಮಾಡಿ ಮನೆ ಕಡೆಗೆ ಮುಖ ಮಾಡುವವರಿದ್ದರು. ಆದರೆ ಅಷ್ಟರಲ್ಲಾಗಲೇ ಮುಸುಕುದಾರಿಗಳಾಗಿ ಬಂದ ದುಷ್ಕರ್ಮಿಗಳು ಪ್ರತ್ಯೇಕ ಸ್ಥಳಗಳಲ್ಲಿ ಪ್ರವೀಣ್​ ಕುಮಾರ್​ ಹಾಗೂ ಪ್ರೇಮ್​ ಸಿಂಗ್​ಗೆ ಚಾಕು ಇರಿದು ಎಸ್ಕೇಪ್​ ಆಗಿದ್ದರು. ಪ್ರೇಮ್​ ಸಿಂಗ್​ ಮೇಲೆ ಮಾರಣಾಂತಿಕ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಪೊಲೀಸರು ತಡರಾತ್ರಿ ವಶಕ್ಕೆ ಪಡೆದಿದ್ದಾರೆ.


ಈ ಘಟನೆ ನಡೆದು ಇನ್ನು ಒಂದು ದಿನ ಪೂರ್ಣಗೊಳ್ಳುವ ಮುನ್ನವೇ ಇದೀಗ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆಯನ್ನು ನಡೆಸಿದ್ದಾರೆ. ಭಜರಂಗದಳದ ಕಾರ್ಯಕರ್ತನಾಗಿರುವ 27 ವರ್ಷದ ಸುನೀಲ್​ ಎಂಬಾತ ಇಂದು ಬೆಳಗ್ಗೆ ತನ್ನ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಮಾರಣಾಂತಿಕ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಸುನೀಲ್​ನನ್ನು ಭದ್ರಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನು ಓದಿ : cleared all flexes in shivamogga : ಶಿವಮೊಗ್ಗ ಗಲಾಟೆ ಪ್ರಕರಣ : ನಗರಾದ್ಯಂತ ಎಲ್ಲಾ ಫ್ಲೆಕ್ಸ್​ಗಳನ್ನು ತೆರವುಗೊಳಿಸಿದ ಪಾಲಿಕೆ

ಇದನ್ನೂ ಓದಿ : Savarkar controversy : ನಮ್ಮ ಮೆಟ್ರೋಗೂ ಕಾಲಿಟ್ಟ ಸಾರ್ವಕರ್ ವಿವಾದ : ಪೋಟೋ ಅಳವಡಿಕೆಗೆ ವಿರೋಧ

Deadly attack on Hindu youth in Bhadravati

Comments are closed.