Fire incident in market: ಸಂಜಯ್‌ ಮಾರ್ಕೆಟ್‌ನಲ್ಲಿ ಬೆಂಕಿ ಅವಘಡ : ಹಲವು ಅಂಗಡಿಗಳು ಬೆಂಕಿಗಾಹುತಿ

ಪ್ರಯಾಗ್‌ ರಾಜ್:‌ (Fire incident in market) ಸಂಜಯ್ ಮಾರ್ಕೆಟ್‌ನಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಸಮೀಪದಲ್ಲಿ ನಿರ್ಮಿಸಲಾಗಿದ್ದ ಹಲವು ಅಂಗಡಿಗಳಿಗೆ ಬೆಂಕಿ ತಗುಲಿದ್ದು, ಅಂಗಡಿಗಳು ಸುಟ್ಟು ಕರಕಲಾಗಿವೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಸಂಜಯ್ ಮಾರ್ಕೆಟ್‌ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಸಂಜಯ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿರುವುದು ಕಂಡು ಬಂದಿದೆ. ಸದ್ಯ ಪ್ರಾಣಹಾನಿಯ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ.

ವರದಿಗಳ ಪ್ರಕಾರ, ಬೆಂಕಿಯು ತನ್ನ ಭೀಕರತೆಯನ್ನು ತೋರ್ಪಡಿಸುತ್ತಿದ್ದು, ಅನೇಕ ಅಂಗಡಿಗಳನ್ನು ಆವರಿಸಿದೆ. ಆದರೆ, ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದರೂ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಈ ಘಟನೆಯು ಅಂಗಡಿ ಮಾಲೀಕರು ಮತ್ತು ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕವನ್ನುಂಟು ಮಾಡಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಲಾಗುತ್ತಿದೆ.

ಇದನ್ನೂ ಓದಿ : ಗುಂಪು ಘರ್ಷಣೆ ಕಲ್ಲು ತೂರಾಟ : 14 ಮಂದಿಗೆ ಗಾಯ, ನಿಷೇಧಾಜ್ಞೆ ಜಾರಿ

ಇದನ್ನೂ ಓದಿ : Fire broke out in factory: ದೆಹಲಿಯ ಕಾರ್ಖಾನೆಯೊಂದರಲ್ಲಿ ಭಾರೀ ಬೆಂಕಿ ಅವಘಡ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಇದನ್ನೂ ಓದಿ : Consuming carbon monoxide-6 died: ಸೊಳ್ಳೆ ಬತ್ತಿ ಹಚ್ಚುವ ಮುನ್ನ ಹುಷಾರ್ : ಒಂದೇ ಕುಟುಂಬದ 6 ಮಂದಿ ಬಲಿ

Fire incident in market: Fire incident in Sanjay Market: Many shops were gutted

Comments are closed.