ಕುಂದಾಪುರ : ಪ್ರಥಮ ಪಿಯುಸಿ ಫಲಿತಾಂಶಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಕುಂದಾಪುರ : ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತೀರ್ಣನಾಗುವ ಭಯದಲ್ಲಿ ವಿದ್ಯಾರ್ಥಿಯೋರ್ವ (Student Suicide) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಎಂಬಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಬೇಬಿ ಶೆಡ್ತಿ ಎಂಬವರ ಮಗ ಸುದೀಪ್‌ (17 ವರ್ಷ) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಮೃತ ಸುದೀಪ್‌ ಬೈಂದೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಪ್ರಥಮ ಪಿಯುಸಿ ಫಲಿತಾಂಶದಲ್ಲಿ ತಾನು ಉತ್ತೀರ್ಣನಾಗುವುದಿಲ್ಲ ಎಂಬ ಭಯ ಕಾಡುತ್ತಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅಡುಗೆ ಮನೆಯಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೈಂದೂರು ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಕೆಲಸಕ್ಕೆ ಸೇರಿದ ದಿನವೇ ಅತ್ಯಾಚಾರವೆಸಗಿ ನರ್ಸ್‌ ಕೊಲೆ

ಉತ್ತರ ಪ್ರದೇಶ : ಮಹಿಳೆಯೋರ್ವಳು ನರ್ಸ್‌ (Nurse Murder) ಕೆಲಸಕ್ಕೆ ಸೇರಿದ ಮೊದಲ ದಿನವೇ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದ ನ್ಯೂ ಜೀವನ್‌ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳೆಯನ್ನ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕುರಿತು ಪೋಷಕರು ಆರೋಪ ಮಾಡಿದ್ದಾರೆ. ನ್ಯೂ ಜೀವನ್‌ ಖಾಸಗಿ ನರ್ಸಿಂಗ್ ಹೋಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೂವರ ವಿರುದ್ದ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ನ್ಯೂ ಜೀವನ್ ಆಸ್ಪತ್ರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸಾವಿನ ಕಾರಣವನ್ನು ಖಚಿತಪಡಿಸಿ ಕೊಳ್ಳಲು, ಮರಣೋತ್ತರ ಪರೀಕ್ಷೆಗೆ ಆದೇಶಿಸಲಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಮತ್ತು ನಂತರ ಹತ್ಯೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನಾವ್‌ನ ಹೆಚ್ಚುವರಿ ಎಸ್ಪಿ ಶಶಿಶೇಖರ್ ಸಿಂಗ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ಸಂಬಂಧಿಗಳಿಂದಲೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ : ಹಣಕ್ಕಾಗಿ ವಿಡಿಯೋ ಚಿತ್ರೀಕರಿಸಿದ ಪಾಪಿ ಪತಿ

ಇದನ್ನೂ ಓದಿ : ರಾಜೇಶ್‌ ಕುಂದರ್‌ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ : ಡೆತ್‌ನೋಟ್‌ನಲ್ಲಿದೆ ನಾಲ್ವರ ಹೆಸರು

First PUC Exams fear Student Suicide in Byndoor

Comments are closed.