Onion Lorry Accident : ಲಾರಿ – ಟ್ಯಾಂಕರ್‌ ನಡುವೆ ಭೀಕರ ಅಪಘಾತ : ನಾಲ್ವರ ದುರ್ಮರಣ

ಚಿತ್ರದುರ್ಗ : ಈರುಳ್ಳಿ ಸಾಗಿಸುತ್ತಿದ್ದ ಲಾರಿ ಹಾಗೂ ಟ್ಯಾಂಕರ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Onion Lorry Accident) ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರಾಯಚೂರು ಮೂಲದ ಹುಲುಗಪ್ಪ, ರೋಣ ಮೂಲದ ಚಾಲಕ ಶರಣಪ್ಪ ಎಂಬವರೇ ಮೃತ ದುರ್ದೈವಿಗಳು. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಈರುಳ್ಳಿ ಸಾಗಾಟ ಮಾಡುತ್ತಿತ್ತು. ಈ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಗದಗದಿಂದ ಬೆಂಗಳೂರಿಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಪಂಕ್ಚರ್‌ ಆಗಿತ್ತು. ಈ ವೇಳೆಯಲ್ಲಿ ಲಾರಿಯನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಪಂಕ್ಚರ್‌ ಹಾಕುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಟ್ಯಾಂಕರ್‌ ಲಾರಿಗೆ ಢಿಕ್ಕಿ ಹೊಡೆದಿದೆ. ಇದರಿಂದಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಕೆಲ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ : School girl : ಸಿನಿಮಾದಲ್ಲಿ ನಟಿಸುವ ಆಮಿಷ : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

ಇದನ್ನೂ ಓದಿ : Fortuner – KSRCT BUS ನಡುವೆ ಭೀಕರ ಅಪಘಾತ : ನಾಲ್ವರು ದುರ್ಮರಣ

( four Killed Onion Lorry and Tanker Accident near Chitradurga)

Comments are closed.