Gorakhpur Crime: ಆಸ್ತಿ ವಿವಾದ: ತಂದೆಯನ್ನೇ ಕೊಂದು ದೇಹವನ್ನು ಕತ್ತರಿಸಿದ ಕ್ರೂರಿ ಮಗ

ಗೋರಖ್‌ಪುರ: (Gorakhpur Crime) ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 62 ವರ್ಷದ ತಂದೆಯನ್ನು ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಕೊಲೆಯ ನಂತರ ಆರೋಪಿಯು ಮೃತದೇಹವನ್ನು ಸೂಟ್‌ಕೇಸ್‌ಗೆ ತುಂಬಿಸಿ ಅದನ್ನು ವಿಲೇವಾರಿ ಮಾಡುವ ಕಾರಣಕ್ಕೆ ತುಂಡುಗಳಾಗಿ ಕತ್ತರಿಸಿದ್ದಾರೆ. ತಿವಾರಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೂರಜ್ ಕುಂಡ್ ಕಾಲೋನಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮುರಳಿ ಧಾರ್ ಗುಪ್ತಾ(62 ವರ್ಷ) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಒಬ್ಬನೇ ಇರುವುದನ್ನು ಕಂಡು ಆರೋಪಿಗಳು ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾರೆ. ಸಂತ್ರಸ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಸಹೋದರನ ಕೊಠಡಿಯಿಂದ ಸೂಟ್‌ಕೇಸ್ ತಂದು ಶವದ ತುಂಡುಗಳನ್ನು ಸೂಟ್‌ಕೇಸ್‌ನಲ್ಲಿ ಇರಿಸಿ ಮನೆಯ ಹಿಂದಿನ ಬೀದಿಯಲ್ಲಿ ಬಚ್ಚಿಟ್ಟಿದ್ದಾರೆ. ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಆಗಮಿಸಿ ದೇಹದ ಭಾಗಗಳನ್ನು ವಶಪಡಿಸಿಕೊಂಡು, ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಆರೋಪಿಯ ತಂದೆ ಮುರಳಿ ಧಾರ್ ಗುಪ್ತಾ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಸಂತೋಷ್ ಕುಮಾರ್ ಗುಪ್ತಾ ಅಲಿಯಾಸ್ ಪ್ರಿನ್ಸ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಕೃಷ್ಣ ಕುಮಾರ್ ಬಿಷ್ಣೋಯ್ ತಿಳಿಸಿದ್ದಾರೆ. ಕುಟುಂಬದಲ್ಲಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆಯನ್ನು ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : Kidnap and Rape: ಕ್ರೀಡಾಕೂಟದ ವೇಳೆ ವಿದ್ಯಾರ್ಥಿ ಅಪಹರಿಸಿ ಸಾಮೂಹಿಕ ಅತ್ಯಾಚಾರ : 3 ಯುವಕರ ವಿರುದ್ದ ಪ್ರಕರಣದ ದಾಖಲು

ಇದನ್ನೂ ಓದಿ : Uttar Pradesh Fire accident: ಉತ್ತರ ಪ್ರದೇಶದಲ್ಲಿ ಅಗ್ನಿ ಅವಘಡ: 5 ಸಾವು

ಇತ್ತೀಚೆಗೆ ದೇಶದಲ್ಲಿ ಕೊಲೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊಲೆ ಮಾಡುವುದು ಮನುಷ್ಯನಿಗೆ ನೀರು ಕುಡಿಯುವಷ್ಟು ಸುಲಭವಾಗಿ ಬಿಟ್ಟಿದೆ. ಕೊಲೆ ಮಾಡಿ ಸಿಕ್ಕಿಬೀಳಬಾರದೆನ್ನುವ ಕಾರಣಕ್ಕೆ ದೇಹವನ್ನು ಕತ್ತರಿಸುವಷ್ಟು ನರರಾಕ್ಷಸರಾಗಿದ್ದಾರೆ ಜನತೆ.

Gorakhpur Crime: Property dispute: Cruel son who killed his father and mutilated his body

Comments are closed.