Hyderabad warehouse fire accident: ಹೈದರಾಬಾದ್ ನ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ

ಹೈದರಾಬಾದ್: (Hyderabad warehouse fire accident ) ನಗರದ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಹೈದರಾಬಾದ್‌ನ ಚಿಕ್ಕಡಪಲ್ಲಿ ಪ್ರದೇಶದ ಗೋದಾಮಿನಲ್ಲಿ ಗುರುವಾರ ಬೆಳಗ್ಗೆ ಈ ಅಗ್ನಿ ಅವಘಡ ಸಂಭವಿಸಿದೆ

ಹೈದರಾಬಾದ್‌ನ ಚಿಕ್ಕಡಪಲ್ಲಿ ಪ್ರದೇಶದ ಟೆಂಟ್ ಹೋಲ್ ಸೇಲ್ ಗೋದಾಮಿನಲ್ಲಿ ಗುರುವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಟೆಂಡರ್‌ಗಳನ್ನು ಕರೆಯಲಾಗಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ವರದಿಗಳ ಪ್ರಕಾರ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಘಟನೆಗೆ ನಿಖರ ಕಾರಣಗಳು ಏನೆಂಬುದು ಇನ್ನೂ ತಿಳಿದುಬಂದಿಲ್ಲ.

“ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಲಾರಿ ದುರಸ್ತಿ ವೇಳೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನಿಗೆ ಗಾಯ

ಮೂಲ್ಕಿ: ಹೆದ್ದಾರಿ ಬದಿಯಲ್ಲಿ ಲಾರಿ ದುರಸ್ತಿ ಮಾಡುತ್ತಿದ್ದವರಿಗೆ ಕಾರು ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯ ಪಡುಪಣಂಬೂರು ಪೆಟ್ರೋಲ್‌ ಪಂಪ್‌ ಬಳಿ ನಡೆದಿದೆ. ಮಧ್ಯಪ್ರದೇಶದ ಬಬುಲು (23 ವರ್ಷ) ಹಾಗೂ ಅಚಲ್‌ ಸಿಂಗ್‌ (30 ವರ್ಷ) ಮೃತಪಟ್ಟಿರುವವರು.

ಮಧ್ಯಪ್ರದೇಶದ ಇಂದೋರ್‌ ನಿಂದ ಕೇರಳಕ್ಕೆ ತೆರಳುತ್ತಿದ್ದ ಲಾರಿಯ ಚಕ್ರ ಪಂಕ್ಚರ್‌ ಆಗಿದ್ದು, ಪಡುಪಣಂಬೂರು ಹೆದ್ದಾರಿ ಬಳಿಯಲ್ಲಿ ಕೆಟ್ಟು ನಿಂತಿದೆ. ಹೀಗಾಗಿ ಲಾರಿಯನ್ನು ದುರಸ್ತಿ ಮಾಡಲು ಮೂವರು ಕೆಳಗಿಳಿದು ಟಯರ್‌ ಬದಲಿಸುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಟಯರ್‌ ಬದಲಿಸುತ್ತಿದ್ದ ಮೂವರಿಗೂ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದೀಗ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ : Mulki car accident: ಲಾರಿ ದುರಸ್ತಿ ವೇಳೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನಿಗೆ ಗಾಯ

ಇದನ್ನೂ ಓದಿ : UP Man shot dead: ಮದುವೆ ಸಮಾರಂಭದಲ್ಲಿ ವರನ ಸ್ನೇಹಿತರೊಂದಿಗೆ ಜಗಳ: ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ

ಇದನ್ನೂ ಓದಿ : Concret mixer truck accident: ಕಾಂಕ್ರೀಟ್ ಮಿಕ್ಸರ್ ಟ್ರಕ್-ಕಾರು ಭೀಕರ ಅಪಘಾತ: ಇಬ್ಬರು ಸಾವು

ಇನ್ನೂ ಘಟನೆ ನಡೆಯುತ್ತಿದ್ದಂತೆ ಕಾರು ಚಾಲಕ ಕಾರಿನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಘಟನೆಯ ಕುರಿತು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಆರೋಪಿಯನ್ನು ಹುಡುಕುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ

Hyderabad warehouse fire accident: A huge fire accident in a warehouse in Hyderabad

Comments are closed.