ಕಾರು – ಟ್ರಕ್‌ ಭೀಕರ ಅಪಘಾತ : ಸ್ಥಳದಲ್ಲಿಯೇ ಐದು ಮಂದಿ ದುರ್ಮರಣ

ನವದೆಹಲಿ : ಕಾರು ಹಾಗೂ ಟ್ರಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ.

ಉತ್ತರಾಖಂಡದ ಹರಿದ್ವಾರದಿಂದ ಗಾಜಿಯಾಬಾದ್ ಕುಟುಂಬವೊಂದು ಕಾರಿನಲ್ಲಿ ತೆರಳುತ್ತಿತ್ತು. ಉತ್ತರ ಪ್ರದೇಶದ ಗಾಜಿಯಾಬಾದ್‌ ಜಿಲ್ಲೆಯ ಮಸೂರಿ ಪ್ರದೇಶದಲ್ಲಿ ಸಾಗುತ್ತಿದ್ದ ವೇಳೆಯಲ್ಲಿ ಕಾರು ಟ್ರಕ್‌ಗೆ ಢಿಕ್ಕಿಯಾಗಿದೆ. ಭೀಕರ ಅಪಘಾತದಲ್ಲಿ ದಂಪತಿ, ಮೂವರು ಮಕ್ಕಳು ಸೇರಿದಂತೆ ಐದು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರಿನಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ. ಗಾಜಿಯಾಬಾದ್‌ನ ದಾಸ್ನಾ ಮೂಲಕ ಉತ್ತರ ಪ್ರದೇಶ ಹಾಗೂ ದೆಹಲಿಯ ಜೊತೆಗೆ ಈ ಹೈವೆ ಸಂಪರ್ಕ ಕಲ್ಪಿಸುತ್ತದೆ. ದೆಹಲಿ ಹಾಗೂ ಮೀರತ್‌ ಎಕ್ಸ್‌ಪ್ರೆಸ್‌ ವೇ ಕಳೆದ ಎಪ್ರಿಲ್‌ ತಿಂಗಳಿನಿಂದ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದೀಗ ಭೀಕರ ಅಪಘಾತವೊಂದು ಸಂಭವಿಸಿದೆ.

ಇದನ್ನೂ ಓದಿ :  5 ರೂಪಾಯಿ ನಾಣ್ಯ ನುಂಗಿದ ಬಾಲಕಿಯ ದುರಂತ ಅಂತ್ಯ

ಇದನ್ನೂ ಓದಿ :  200 ಕೋಟಿ ಸುಲಿಗೆ ಆರೋಪ: ನಟಿ ಹಾಗೂ ರೂಪದರ್ಶಿ ಲೀನಾ ಮರಿಯಾ ಪೌಲ್ ಬಂಧನ

(Car-truck accident in Uttarakhand: Five killed on spot)

Comments are closed.