Car Accident : ಕಾರುಗಳ ನಡುವೆ ಭೀಕರ ಅಪಘಾತ : 3 ಮಂದಿ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಬೆಂಗಳೂರು : ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಢಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಏರ್‌ ಪೋರ್ಟ್‌ ರಸ್ತೆಯಲ್ಲಿ ನಡೆದಿದೆ. ಗಾಯ ಗೊಂಡಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಕೊಲ್ಕತ್ತಾ ಮೂಲದ ಪೂರ್ಣಿಮಾ ರವೀಂದ್ರ ( 57 ವರ್ಷ ), ಲಕ್ಷ್ಮೀರವೀಂದ್ರ (38 ವರ್ಷ ) ಹಾಗೂ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಕೊಲ್ಕತ್ತಾ ಮೂಲದ ಇಬ್ಬರು ಮಹಿಳೆಯರು ಏರ್‌ಪೋರ್ಟ್‌ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆಯಲ್ಲಿ ಎದುರಿನಿಂದ ಬರುತ್ತಿದ್ದ ಬೆಟ್ಟ ಹಲಸೂರು ಕ್ರಾಸ್‌ ಬಳಿಯಲ್ಲಿ ಎಕ್ಸ್‌ಯೂವಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ನಂತರ ಕಾರು ಡಿವೈಡರ್‌ ದಾಟಿಕೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿಯಾಗಿದೆ. ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇನ್ನೊಂದು ಕಾರಿನಲ್ಲಿದ್ದ ಭರತ್‌ ಹಾಗೂ ವಿಕಾಸ್‌ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆಯನ್ನು ನಡೆಸಲಾಗುತ್ತಿದೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಾಲಕನಿಗೆ ಡಿವೈಡರ್‌ ಗೋಚರಿಸದೇ ಈ ಘಟನೆ ನಡೆದಿದೆ. ಇನ್ನು ಕಾರು ಚಾಲಕ ಭರತ್‌ ಹಾಗೂ ವಿಕಾಸ್‌ ಮದ್ಯಪಾನ ಮಾಡಿದ್ದರು, ಕುಡಿದ ಮತ್ತಲ್ಲಿ ಕಾರು ಚಲಾಯಿಸಿದ್ದೇ ಘಟನೆ ಕಾರಣವೆನ್ನಲಾಗುತ್ತಿದೆ.

ಸ್ಥಳಕ್ಕೆ ಭೇಟಿ ನೀಡಿದ್ದ ಚಿಕ್ಕಜಾಲ ಠಾಣೆಯ ಪೊಲೀಸರು ಕಾರಿನಲ್ಲಿದ್ದ ಮೂವರ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಮೃತ ದೇಹಗಳನ್ನು ಕಾರಿನಲ್ಲಿಯೇ ಇಟ್ಟು ಟೋಯಿಂಗ್‌ ಮಾಡಿದ್ದಾರೆ. ಸದ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

(Deadly Car Accident between cars 3 killed two injured in Bangalore Airport Road)

Comments are closed.