ಮಂಗಳವಾರ, ಏಪ್ರಿಲ್ 29, 2025
HomeCrimeCrime News : ಕುಡಿದ ಮತ್ತಲ್ಲಿ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ :...

Crime News : ಕುಡಿದ ಮತ್ತಲ್ಲಿ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ : ಬಿಬಿಎಂಪಿ ಅಧಿಕಾರಿ ಅರೆಸ್ಟ್‌

- Advertisement -

ಬೆಂಗಳೂರು : ತನ್ನ ವಿರುದ್ದ ಸುಳ್ಳ ಕೇಸ್‌ ದಾಖಲಿಸಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ರೆವೆನ್ಯೂ ಇಲಾಖೆಯ ಅಧಿಕಾರಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ನಡೆದಿದೆ.

ಸುನಿಲ್‌ ಎಂಬಾತನೇ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ. ಈತ ಬಿಬಿಎಂಪಿ ರೆವಿನ್ಯೂ ಇಲಾಖೆಯ ಅಧಿಕಾರಿಯಾಗಿ ಕೆಲಸ ಮಾಡ್ತಿದ್ದ. ಹೌಗ್ರೌಂಡ್ಸ್‌ ಪೊಲೀಸ್‌ ಠಾಣೆಗೆ ನುಗ್ಗಿದ್ದ ಸುನಿಲ್‌ ಏಕಾಏಕಿಯಾಗಿ ಪೊಲೀಸ್‌ ಸಿಬ್ಬಂದಿಯಾಗಿರುವ ರೇಣು ಕುಮಾರ್‌ ಎಂಬವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಅಲ್ಲದೇ ಎಸ್‌ಎಚ್‌ ಓ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾನೆ.

ಕುಡಿದ ಮತ್ತಿನಲ್ಲಿದ್ದ ಸುನಿಲ್‌ನನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಸುನಿಲ್‌ ವಿರುದ್ದ ಆತನ ಅತ್ತೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕುಡಿದು ಪೊಲೀಸ್‌ ಠಾಣೆಗೆ ಬಂದಿದ್ದ ಸುನಿಲ್‌ ಗಲಾಟೆ ಮಾಡಿದ್ದಾನೆ. ಇದೀಗ ಪೊಲೀಸರು ಸುನಿಲ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮಗನ ಶಾಲಾ ವಾಟ್ಸಾಪ್ ಗ್ರೂಪ್‌ಗೆ ಅಶ್ಲೀಲ ಚಿತ್ರ, ವಿಡಿಯೋ ಕಳುಹಿಸಿದ ವ್ಯಕ್ತಿ ಅರೆಸ್ಟ್‌

ಇದನ್ನೂ ಓದಿ : 17 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ : ವಿಡಿಯೋ ಹರಿಬಿಟ್ಟ ಕಾಮುಕರು

( Drunk, he broke into the High Grounds Police station and tried to attack the police : BBMP Revenue Officer Arrest )

Arun Gundmi | ಅರುಣ್ ಗುಂಡ್ಮಿ
Arun Gundmi Editor In Chief News Next Kannada. Working in more than 20 Years in Kannada Media (Print, Digital and News Channels. Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular