ಮಂಗಳವಾರ, ಏಪ್ರಿಲ್ 29, 2025
HomeCrimeಡ್ರಗ್ಸ್‌ ಸೇವಿಸಿ ಕಾರು ಚಲಾಯಿಸಿದ್ದೇ ಕೋರಮಂಗಲ ಅಪಘಾತಕ್ಕೆ ಕಾರಣ !

ಡ್ರಗ್ಸ್‌ ಸೇವಿಸಿ ಕಾರು ಚಲಾಯಿಸಿದ್ದೇ ಕೋರಮಂಗಲ ಅಪಘಾತಕ್ಕೆ ಕಾರಣ !

- Advertisement -

ಬೆಂಗಳೂರು : ಕೋರಮಂಗದಲ್ಲಿ ನಡೆದಿದ್ದ ಭೀಕರ ಆಡಿ ಕಾರು ಅಪಘಾತ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಕಾರಿನಲ್ಲಿದ್ದವರು ಡ್ರಗ್ಸ್‌ ಸೇವನೆ ಮಾಡಿ ಕಾರು ಚಲಾಯಿಸಿದ್ರಾ ಅನ್ನೋ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ಇಂದ್ರಜಿತ್‌ ಲಂಕೇಶ್‌ ಗಂಭೀರ ಆರೋಪ ಮಾಡಿದ್ದಾರೆ.

ಕೋರಮಂಗಲದ ಮಂಗಳ ಕಲ್ಯಾಣ ಮಂಟಪ ಮಧ್ಯರಾತ್ರಿ 1.30ರ ಸುಮಾರಿಗೆ ಆಡಿ ಕಾರ್‌ವೊಂದು ಭೀಕರ ಅಪಘಾತಕ್ಕೆ ಈಡಾಗಿತ್ತು. ಕಾರಿನಲ್ಲಿದ್ದ ಹೊಸೂರು ಶಾಸಕ ಪ್ರಕಾಶ್‌ ಪುತ್ರ ಕರುಣಾಸಾಗರ್‌, ಸೊಸೆ ಬಿಂದು, ಇಶಿತಾ, ಡಾ.ಧನುಷಾ, ಅಕ್ಷಯ್‌ ಗೋಯಲ್‌, ಉತ್ಸವ್‌ ಹಾಗೂ ರೋಹಿತ್‌ ಸೇರಿದಂತೆ ಒಟ್ಟು 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಸಿಲಿಕಾನ್‌ ಸಿಟಿಯಲ್ಲಿ ಇತ್ತೀಚಿಗೆ ನಡೆದ ಭೀಕರ ಅಪಘಾತ ಪ್ರಕರಣವಾಗಿದೆ. ಅಪಘಾತದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಮೇಲ್ನೋಟಕ್ಕೆ ಕಾರು ಓವರ್‌ ಸ್ಪೀಡ್‌ನಲ್ಲಿತ್ತು ಅನ್ನೋದು ಸಿಸಿ ಕ್ಯಾಮರಾ ದೃಶ್ಯಾವಳಿಗಳು ಸಾಕ್ಷ್ಯವನ್ನು ಒದಗಿಸಿದೆ. ಇನ್ನೊಂದೆಡೆಯಲ್ಲಿ ಮದ್ಯ ಸೇವೆಯ ಆರೋಪ ಕೇಳಿಬಂದಿದ್ದು, ಸಾವನ್ನಪ್ಪಿರುವ ಬಿಂದು ಹಾಗೂ ಇಶಿತಾ ಮದ್ಯದಂಗಡಿಯಿಂದ ಮದ್ಯ ಖರೀದಿಸಿ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ದೃಶ್ಯ ಕೂಡ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಷ್ಟೇ ಅಲ್ಲಾ ಬ್ರೇಕ್‌ ಅಡಿಯಲ್ಲಿ ಬಾಟಲಿ ಸಿಲುಕಿಕೊಂಡು ಅಪಘಾತಕ್ಕೆ ಕಾರಣವಾಗಿದೆಯಾ ಅನ್ನೋ ಅನುಮಾನವೂ ವ್ಯಕ್ತವಾಗಿದೆ. ಇದೀಗ ಇಂದ್ರಜಿತ್‌ ಲಂಕೇಶ್‌ ಅಪಘಾತಕ್ಕೆ ಡ್ರಗ್ಸ್‌ ಲಿಂಕ್‌ ಕೊಟ್ಟಿದ್ದಾರೆ.

ಕೋರಮಂಗಲದಲ್ಲಿ ಅಪಘಾತ ನಡೆದಿರುವ ರಸ್ತೆಯಲ್ಲಿ ಸಾಮಾನ್ಯವಾಗಿ ಅತೀ ವೇಗದಲ್ಲಿ ಸಾಗೋದಕ್ಕೆ ಸಾಧ್ಯವಿಲ್ಲ. ಹೀಗಾಗಿ ಕಾರಿನಲ್ಲಿದ್ದವರು ಡ್ರಗ್ಸ್‌ ಸೇವನೆಯನ್ನು ಮಾಡಿಯೇ ಕಾರು ಚಲಾಯಿಸಿರುವ ಸಾಧ್ಯತೆಯಿದೆ. ನಾನು ಈ ಹಿಂದೆಯೂ ಉದ್ಯಮಿಗಳು, ರಾಜಕಾರಣಿಗಳು, ಸಿನಿಮಾ ನಟ, ನಟಿಯರ ಮಕ್ಕಳು ಡ್ರಗ್ಸ್‌ ಸೇವನೆ ಮಾಡುತ್ತಾರೆ ಅನ್ನೋದಾಗಿ ತಿಳಿಸಿದ್ದೇನೆ. ಇದೀಗ ಅಪಘಾತಕ್ಕೂ ಡ್ರಗ್ಸ್‌ ಲಿಂಕ್‌ ಇರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆಯನ್ನು ನಡೆಸಬೇಕಾಗಿದೆ ಎಂದು ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಗಂಭೀರ ಆರೋಪವನ್ನು ಮಾಡಿದ್ದಾರೆ.

ಒಟ್ಟಿನಲ್ಲಿ ಅತೀ ವೇಗ, ಅಜಾಗರೂಕತೆಯ ಕಾರು ಚಾಲನೆ ಇದೀಗ ಏಳು ಮಂದಿಯ ಜೀವವನ್ನೇ ಬಲಿ ಪಡೆದಿದೆ. ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬಸ್ಥರು ಇದೀಗ ಕಣ್ಣೀರಲ್ಲೇ ಕೈ ತೊಳೆಯುತ್ತಿದ್ದಾರೆ. ಪೊಲೀಸರು ಅಪಘಾತಕ್ಕೆ ನಿಖರವಾದ ಕಾರಣ ಹುಡುಕುವ ಕಾರ್ಯವನ್ನು ಮಾಡಬೇಕಾಗಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ಐಶಾರಾಮಿ ಕಾರು ಅಪಘಾತ : ಶಾಸಕರ ಪುತ್ರ, ಸೊಸೆ ಸೇರಿ 7 ಮಂದಿ ದುರ್ಮರಣ

ಇದನ್ನೂ ಓದಿ : ಸೊಸೆಯೊಂದಿಗೆ ಸೆಕ್ಸ್‌ಗೆ ಮಾವನ ಒತ್ತಡ, ಪತಿಯಿಂದಲೂ ಕಿರುಕುಳ

(Drugs injected into the Driving causing the Koramangala Audi Car accident : Indrajit Lankesh Allegation)

Arun Gundmi | ಅರುಣ್ ಗುಂಡ್ಮಿ
Arun Gundmi Editor In Chief News Next Kannada. Working in more than 20 Years in Kannada Media (Print, Digital and News Channels. Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular