ಸೋಮವಾರ, ಏಪ್ರಿಲ್ 28, 2025
HomeCrimeCAR FIRE : ಹೊತ್ತಿ ಉರಿಯಿತು ಚಲಿಸುತ್ತಿದ್ದ ಕಾರು : ತಪ್ಪಿತು ಬಾರೀ ಅನಾಹುತ

CAR FIRE : ಹೊತ್ತಿ ಉರಿಯಿತು ಚಲಿಸುತ್ತಿದ್ದ ಕಾರು : ತಪ್ಪಿತು ಬಾರೀ ಅನಾಹುತ

- Advertisement -

ಹಾಸನ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರೊಂದು ಹೊತ್ತಿ ಉರಿದಿರುವ ಘಟನೆ ಹಾಸನ ಜಿಲ್ಲೆಯ ಅರಸಿಕರೆ ಪಟ್ಟಣದಲ್ಲಿ ನಡೆದಿದ್ದು, ಚಾಲಕನ ಚಾಣಾಕ್ಷತೆ ಯಿಂದ ಬಾರೀ ದುರಂತವೊಂದು ತಪ್ಪಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಮಲ್ಲಿಕಾರ್ಜುನ್‌ ಎಂಬವರು ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆಯಲ್ಲಿ ಕಾರಿನಲ್ಲಿ ಒಮ್ಮಿಂದೊಮ್ಮೆ ಹೊಗೆ ಕಾಣಿಸಿಕೊಂಡಿತ್ತು. ಕೂಡಲೇ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ ಕಾರಿನಿಂದ ಕೆಳಗೆ ಇಳಿದಿದ್ದಾರೆ. ಕೂಡಲೇ ಕಾರಿನಲ್ಲಿದ್ದ ಎಲ್ಲಾ ವಸ್ತುಗಳನ್ನು ಹೊರತೆ ತೆಗೆದಿದ್ದಾರೆ. ಅಷ್ಟರಲ್ಲಾಗಲೇ ಕಾರಿನ ಮುಂಭಾಗದಲ್ಲಿ ಬೆಂಕಿಸಿಕೊಂಡು ಹೊತ್ತಿ ಉರುಯುವುದಕ್ಕೆ ಆರಂಭವಾಗಿತ್ತು.

ಕೂಡಲೇ ಸ್ಥಳೀಯರು ಮಲ್ಲಿಕಾರ್ಜುನ್‌ ಅವರ ಸಹಾಯಕ್ಕೆ ನಿಂತಿದ್ದಾರೆ. ಅಲ್ಲದೇ ಕಾರಿಗೆ ತಲುಗಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನ ಬ್ಯಾಟರಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಈ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಯಲ್ಲಿ ಕಾರು ಭಾಗಶಃ ಸುಟ್ಟು ಕರಕಲಾಗಿದೆ.

ಇದನ್ನೂ ಓದಿ : ಯುವತಿಯ ಮದುವೆ ತಪ್ಪಿಸಲು ಅಶ್ಲೀಲ ವಿಡಿಯೋ ಹರಿಬಿಟ್ಟ ಕಿರಾತಕರು : ನಾಲ್ವರು ಅರೆಸ್ಟ್‌

ಇದನ್ನೂ ಓದಿ : ಸೀರೆ ಧರಿಸಿದವರಿಗೆ ಪ್ರವೇಶವಿಲ್ಲ: ರೆಸ್ಟೋರೆಂಟ್ ವಿರುದ್ಧ ಸಮರ ಸಾರಿದ ಬಾಲಿವುಡ್ ನಟಿ

( Fire found in a moving car in Hassan )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular