ಸೋಮವಾರ, ಏಪ್ರಿಲ್ 28, 2025
HomeCrimeಚಿಕ್ಕಬಳ್ಳಾಪುರ ಭೀಕರ ಅಪಘಾತ : ಸಾವಿನ ಸಂಖ್ಯೆ 8 ಕ್ಕೆ ಏರಿಕೆ

ಚಿಕ್ಕಬಳ್ಳಾಪುರ ಭೀಕರ ಅಪಘಾತ : ಸಾವಿನ ಸಂಖ್ಯೆ 8 ಕ್ಕೆ ಏರಿಕೆ

- Advertisement -

ಚಿಕ್ಕಬಳ್ಳಾಪುರ : ಪ್ಯಾಸೆಂಜರ್‌ ಜೀಪ್‌ ಹಾಗೂ ಟ್ರಕ್‌ ನಡುವೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಇದೀಗ 8ಕ್ಕೆ ಏರಿಕೆಯಾಗಿದೆ. ಜೀಪಿನಲ್ಲಿ ಒಟ್ಟು17 ಮಂದಿ ಪ್ರಯಾಣಿಸುತ್ತಿದ್ದು, ಓವರ್‌ ಟೇಕ್‌ ಮಾಡುವ ಭರದಲ್ಲಿ ಈ ಅಪಘಾತ ನಡೆದಿತ್ತು. ಆರಂಭದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಇದೀಗ ಮತ್ತಿಬ್ಬರು ಮೃತಪಟ್ಟಿದ್ದಾರೆ.

ಗೋಪಲ್ಲಿಯ ಮುನಿರತ್ಮಮ್ಮ(49 ವರ್ಷ), ರಾಯಲ್ಪಾಡುವಿನ ರಮೇಶ್ (49 ವರ್ಷ), ಕೂಸಂದ್ರದ ನಿಖಿಲ್(22ವರ್ಷ ), ಸೊಣ್ಣಶೆಟ್ಟಿಹಳ್ಳಿಯ ನಾರಾಯಣ್ವಾಮಿ (55 ವರ್ಷ), ವೆಂಕಟಲಕ್ಷಮ್ಮ(45ವರ್ಷ ) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅಲ್ಲದೇ ಸೋಮಯಾಜಲಪಲ್ಲಿಯ ವೆಂಕಟಲಕ್ಷ್ಮಿ, ದಿಬ್ಬೂರಳ್ಳಿಯ ಯಶೋಧಮ್ಮ, ನಂಬೂರ್ಲಹಳ್ಳಿಯ ಸತ್ಯಪ್ಪ, ನಾಗದೇನಹಳ್ಳಿಯ ಮುನಿಸ್ವಾಮಿ, ರಾಯಲ್ಪಾಡುವಿನ ಮಂಜುನಾಥ್, ಕಿತ್ತಗನೂರಿನ ಅಂಬರೀಶ್ ಗಾಯಗೊಂಡಿದ್ದು, ಹಲವರ ಗುರುತು ಪತ್ತೆಯಾಗಿಲ್ಲ.

ಶ್ರೀನಿವಾಸಪುರದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಪ್ಯಾಸೆಂಜರ್ ಜೀಪ್ ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಜೀಪಿನಲ್ಲಿದ್ದ6 ಮಂದಿ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯ ಗೊಂಡಿರುವ 11 ಮಂದಿಯನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರಿಗೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೀಪ್‍ನಲ್ಲಿ ಇಬ್ಬರು ಮಕ್ಕಳು, 6 ಜನ ಮಹಿಳೆಯರು, 9 ಜನ ಪುರುಷರು ಸೇರಿದಂತೆ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದರು. ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಲಾರಿ- ಜೀಪ್‌ ನಡುವೆ ಭೀಕರ ಅಪಘಾತ : 6 ಮಂದಿ ಸಾವು, 11 ಮಂದಿ ಗಂಭೀರ

ಇದನ್ನೂ ಓದಿ : ಮನೆ ಬಿಟ್ಟು ಓಡಿ ಹೋಗಿದ್ದ 14 ವರ್ಷದ ಬಾಲಕಿಯ ಮೇಲೆ 13 ಮಂದಿಯಿಂದ ಅತ್ಯಾಚಾರ

(Jeep and truck Accident 8 killed, 9 serious injury in Chikkaballapur )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular