ಮಂಗಳವಾರ, ಏಪ್ರಿಲ್ 29, 2025
HomeCrimeಕೇರಳದಲ್ಲಿ ಪ್ರವಾಸಿಗರ ದೋಣಿ ನೀರುಪಾಲು ಮಕ್ಕಳು ಸೇರಿ 22 ಮಂದಿ ಸಾವು

ಕೇರಳದಲ್ಲಿ ಪ್ರವಾಸಿಗರ ದೋಣಿ ನೀರುಪಾಲು ಮಕ್ಕಳು ಸೇರಿ 22 ಮಂದಿ ಸಾವು

- Advertisement -

ತಿರುವನಂತಪುರಂ : ಪ್ರವಾಸಿಗರ ತಾಣದಲ್ಲಿ ಹೆಸರುವಾಸಿಯಾಗಿರುವ ಕೇರಳದಲ್ಲಿ ದುರಂತ ಘಟನೆಯೊಂದು (Kerala tourist boat) ನಡೆದಿದೆ. ಪ್ರವಾಸಿಗರ ದೋಣಿಯೊಂದು ಮುಳುಗಿ ಮಕ್ಕಳು ಸೇರಿದಂತೆ 22 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಈ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.

ಸದ್ಯ ಈ ದುರ್ಘಟನೆ ಕೇರಳದ ಮಲಪ್ಪುರಂನ ತನೂರ್‌ ಪ್ರದೇಶದಲ್ಲಿ ನಡೆದಿದೆ. ಪ್ರವಾಸಿಗರ ದೋಣಿಯಲ್ಲಿ 40 ಪ್ರಯಾಣಿಕರು ಇದ್ದರು. ಘಟನೆಯ ವೇಳೆ ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ದುರ್ಘಟನೆಯಲ್ಲಿ ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯಚಾರಣೆ ನಡೆಯುತ್ತಿದೆ.

ಸಚಿವ ವಿ. ಅಬ್ದುರಹಿಮಾನ್‌ ಮಾಹಿತಿ ನೀಡಿದ್ದು, ಸಾವಿನ ಸಂಖ್ಯೆ ಈಗ 22ಕ್ಕೆ ಏರಿದೆ. 7 ಜನರ ಸ್ಥೀತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ ಘೋಷಿಸಿದ್ದಾರೆ.

ಇದನ್ನೂ ಓದಿ : ಮಣಿಪುರ ಹಿಂಸಾಚಾರ: ಕಂಡಲ್ಲಿ ಗುಂಡಿಕ್ಕಲು ರಾಜ್ಯಪಾಲರ ಸಮ್ಮತಿ

ಕೇರಳದ ಮಲಪ್ಪುರಂನಲ್ಲಿ ದೋಣಿ ದುರಂತದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ವನ್ನು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಮೈಸೂರು ದಸರಾದಲ್ಲಿ 14‌ ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಇನ್ನಿಲ್ಲ

ಇದನ್ನೂ ಓದಿ : IT Raid Bangalore : ಫೈನಾನ್ಶಿಯರ್‌ಗಳ ಮನೆ ಮೇಲೆ ಐಟಿ ದಾಳಿ : 20 ಕೋಟಿ ರೂಪಾಯಿ ಜಪ್ತಿ

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಾವಿಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ್ದು, ಸಂಘಟಿತ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸಿಎಂ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ತಾನೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ : ಬೆಡ್‌ರೂಮ್‌, ಬಾತ್‌ರೂಮ್‌ನಲ್ಲಿ ಕ್ಯಾಮರಾ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ :‌ ಖಾಸಗಿ ಹಾಸ್ಟೆಲ್‌ ಮಾಲೀಕ ಅರೆಸ್ಟ್

Kerala tourist boat: 22 people, including children, died when a tourist boat capsized in Kerala

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular