KSRTC bus-Bike Accident: ಕೆಎಸ್‌ ಆರ್‌ ಟಿಸಿ ಬಸ್‌ – ಬೈಕ್‌ ಢಿಕ್ಕಿ: ಪ್ರತ್ಯೇಕ ಪ್ರಕರಣ ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಬಾಗಲಕೋಟೆ: (KSRTC bus-Bike Accident) ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಘಟಪ್ರಭಾ ಸೇತುವೆ ಮೇಲೆ ನಡೆದಿದೆ.

ಮುಧೋಳದಿಂದ ಲೋಕಾಪುರ ಕಡೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಕೆಎಸ್ ಆರ್‌ ಟಿಸಿ ಬಸ್‌ ಲೋಕಾಪುರದಿಂದ ಮುಧೋಳ ಮಾರ್ಗದಲ್ಲಿ ಹೊರಟ ಬೈಕ್‌ ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯಾದ ಪರಿಣಾಮ ನಂಬರ್‌ ಪ್ಲೇಟ್‌ ಇಲ್ಲದ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಬೈಕ್‌ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನೂ ಅಪಘಾತಕ್ಕೀಡಾದ ಬೈಕ್‌ ನಲ್ಲಿ ನಂಬರ್‌ ಪ್ಲೇಟ್‌ ಇಲ್ಲದಾಗಿದ್ದು, ಇಬ್ಬರೂ ಬೈಕ್‌ ಸವಾರರು ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ. ಸದ್ಯ ಮೃತರ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು ಲೋಕಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗಿದೆ.

ಕಾರು ಮತ್ತು ಬೈಕ್‌ ನಡುವೆ ಮುಖಾಮುಖಿ ಢಿಕ್ಕಿ: ಬೈಕ್‌ ಸವಾರ ಸಾವು

ಯಾದಗಿರಿ: ಕಾರು ಹಾಗೂ ಬೈಕ್‌ ನಡುವೆ ಢಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಬಳಿ ನಡೆದಿದೆ. ಭೀಮಶಪ್ಪ ಎನ್ನುವವರು ಮೃತ ದುರ್ದೈವಿಯಾಗಿದ್ದಾರೆ.

ಇದನ್ನೂ ಓದಿ : Woman killed daughter: 3 ವರ್ಷದ ಮಗಳನ್ನೇ ಕೊಲೆಗೈದು ಚಲಿಸುತ್ತಿದ್ದ ರೈಲಿನಿಂದ ಎಸೆದ ಮಹಿಳೆ

ಇದನ್ನೂ ಓದಿ : Minor girl set on fire: ಅಪ್ರಾಪ್ತ ಬಾಲಕಿ ಬೆಂಕಿ ಹಚ್ಚಿದ ನೀಚರು: ಕಾರಣವಾಗಿದ್ದು ಆ ಒಂದು ಮದುವೆ ಕಾರ್ಯಕ್ರಮ

ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಹಂತಕರ ಸುಳಿವು ಕೊಟ್ಟವರಿಗೆ 10 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳ ಕಾರು ಮತ್ತು ಬೈಕ್‌ ನಡುವೆ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಗುರುಮಠಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

KSRTC Bus-Bike Accident: KSRTC Bus-Bike Collision: Separate Case Bike rider dies on the spot

Comments are closed.