Heavy rain hill collapse : ಭಾರೀ ಮಳೆ ಪರ್ವತಮುಖಿ ಬಳಿ ಗುಡ್ಡ ಕುಸಿತ : ಇಬ್ಬರು ಮಕ್ಕಳ ಸಾವು

ಸುಬ್ರಹ್ಮಣ್ಯ : (Heavy rain hill collapse) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅನಾಹುತವನ್ನೇ ಸೃಷ್ಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪರ್ವತ ಮುಖಿ ಪ್ರದೇಶದಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಮನೆಯಲ್ಲಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿ, ಐವರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.

ನಿನ್ನೆ ರಾತ್ರಿಯ ವೇಳೆಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಕುಸುಮಧಾರ, ರೂಪಶ್ರೀ ದಂಪತಿಯ ಇಬ್ಬರು ಪುತ್ರಿಯರಾದ ಶ್ರುತಿ ಮತ್ತು ಜ್ಞಾನಶ್ರೀ ಮಣ್ಣಿನಡಿಯಲ್ಲಿ ಸಿಲುಕಿ ಮೃತ ಪಟ್ಟಿದ್ದಾರೆ. ಸ್ಥಳೀಯರು ಹಾಗೂ ಅಧಿಕಾರಿಗಳ ನೆರವಿನಿಂದ ರಕ್ಷಣಾ ಕಾರ್ಯಚರಣೆಯನ್ನು ನಡೆಸಲಾಗಿದೆ. ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳೀಯರ ಸಹಕಾರದಿಂದ ಶವಗಳನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಪುತ್ತೂರು ಎಸಿ ಗಿರೀಶ್ ನಂದನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ರಾಜ್ಯದ ಪ್ರಮುಖ ಪುಣ್ಯಕ್ಷೇತ್ರವಾಗಿರುವ ಆದಿ ಸುಬ್ರಹ್ಮಣ್ಯ ದೇವಸ್ಥಾನ ಸಂಪೂರ್ಣವಾಗಿ ಜಲಾವೃತವಾಗಿದೆ. ನಾಗರ ಪಂಚಮಿಯ ದಿನದಂದು ಭಕ್ತರಿಗೆ ಅವಕಾಶವನ್ನು ನಿರಾಕರಿಸಲಾಗಿದೆ. ಅಲ್ಲದೇ ಎರಡು ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : Shivamogga Bus Car Accident : ಬಸ್‌ – ಕಾರು ನಡುವೆ ಭೀಕರ ಅಪಘಾತ : 2 ಸಾವು, 5 ಮಂದಿ ಗಂಭೀರ

ಇದನ್ನೂ ಓದಿ : Tuesday astrology : ಹೇಗಿದೆ ಮಂಗಳವಾರದ ದಿನಭವಿಷ್ಯ

Kukke Subrahmanya Heavy rain causes hill collapse near Parvatmukhi, two children die Mangaluru

Comments are closed.