ಸೋಮವಾರ, ಏಪ್ರಿಲ್ 28, 2025
HomeCoastal NewsMangalore : ಕೆಟ್ಟು ನಿಂತಿದ್ದ ಲಾರಿಗೆ ಬೊಲೆರೋ ಢಿಕ್ಕಿ : ಮೂವರ ದುರ್ಮರಣ

Mangalore : ಕೆಟ್ಟು ನಿಂತಿದ್ದ ಲಾರಿಗೆ ಬೊಲೆರೋ ಢಿಕ್ಕಿ : ಮೂವರ ದುರ್ಮರಣ

- Advertisement -

ಪುತ್ತೂರು : ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೊಲೆರೋ ವಾಹನ ಢಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಬೊಲೆರೋ ಚಾಲಕ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಈ ವೇಳೆಯಲ್ಲಿ ಚಾಲಕನಿಗೆ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದಾನೆ. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಕೆಟ್ಟಿನಿಂತಿದ್ದ ಲಾರಿಯ ಕೆಳಗೆ ದುರಸ್ಥಿಕಾರ್ಯದಲ್ಲಿ ನಿರತರಾಗಿದ್ದ ಮೂವರು ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಪ್ಪಿನಂಗಡಿ ಠಾಣೆಯ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : Udupi : ಪ್ರೇಯಸಿಗೆ ಚೂರಿ ಇರಿದು, ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಇದನ್ನೂ ಓದಿ : Corona Updates : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಜಾರಿ

(Lorry and bolero Accident 3 death in Bedrodi Near Uppinagadi)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular