ಮಂಗಳೂರು : ಅಕ್ರಮ ಮರಳುಗಾರಿಕೆ ಜಾಲ ಬೇಧಿಸಿದ ಪೊಲೀಸರು

Illegal Sand Transport: ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಖದೀಮರ ತಂಡವನ್ನು ಹಿಡಿಯುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಆರ್​ಝಡ್​ ವ್ಯಾಪ್ತಿಯ ನೇತ್ರಾವತಿ ಗುರುಪುರ ನದಿ ಸಂಗಮದಲ್ಲಿರುವ ಅಳಿವೆ ಬಾಗಿಲು ಪ್ರದೇಶದಲ್ಲಿ ಈ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿತ್ತು. ಸೂಕ್ತ ಮಾಹಿತಿ ಆಧರಿಸಿ ಯಶಸ್ವಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

ನದಿಯಿಂದ ಅಕ್ರಮವಾಗಿ ಮರಳನ್ನು ಸಂಗ್ರಹಿಸುತ್ತಿದ್ದ ದುಷ್ಕರ್ಮಿಗಳು ತಡರಾತ್ರಿ ಸಮುದ್ರ ಮಾರ್ಗವಾಗಿ ದೋಣಿ ಮುಖಾಂತರ ಕೇರಳಕ್ಕೆ ಈ ಮರಳನ್ನು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಇಲ್ಲಿ ಮೀನುಗಾರಿಕೆಗೆ ಬರುತ್ತಿದ್ದ ಮೀನುಗಾರರಿಗೆ ಈ ವಿಚಾರ ತಿಳಿದ ಬಳಿಕ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸಂದರ್ಭದಲ್ಲಿ ತಮ್ಮ ಮೊಬೈಲ್​ಗಳಲ್ಲಿ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗಿದೆ.

10ಕ್ಕೂ ಅಧಿಕ ಯಾಂತ್ರೀಕೃತ ಬೋಟ್​ಗಳನ್ನು ಬಳಕೆ ಮಾಡಿ ರಾಶಿ ರಾಶಿ ಮರಳನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು. ಸಮುದ್ರ ಮಾರ್ಗದ ಮೂಲಕ ನಡೆಯುತ್ತಿದ್ದ ಈ ಮರಳು ಮಾಫಿಯಾ ವಿಚಾರ ಪೊಲೀಸರ ಗಮನಕ್ಕೂ ಬಂದಿದೆ. ರಸ್ತೆ ಮಾರ್ಗದ ಮೂಲಕವೂ ಮರಳು ಸಾಗಾಟ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ಮಂಗಳೂರು ಕಮಿಷನರ್​ ಹಾಗೂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅರುಣ್​ ರಸ್ತೆ ಮೂಲಕ ನಡೆಯುತ್ತಿದ್ದ ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕಿದ್ದಾರೆ. ಈ ಸಂಬಂಧ ಸಮಗ್ರ ತನಿಖೆಗೆ ಮುಂದಾಗಿರುವ ಪೊಲೀಸರು ಈ ಅಕ್ರಮದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ ?ಎಂಬುದರ ಬಗ್ಗೆ ಆಳವಾದ ತನಿಖೆಗೆ ಇಳಿದಿದ್ದಾರೆ. ಪೊಲೀಸರ ಈ ತನಿಖೆಯಿಂದ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ದುಷ್ಕರ್ಮಿಗಳಿಗೆ ನಡುಕ ಶುರುವಾಗಿದೆ.

ಇದನ್ನೂ ಓದಿ: ಬಂಟ್ವಾಳದ ಮಹಿಳೆಯನ್ನು ಡಿಜಿಟಲ್ ಅರೆಸ್ಟ್ ಮಾಡಿ ₹1.16 ಕೋಟಿ ವಂಚಿಸಿದ ಖದೀಮರು..!

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories