Mysore : ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ ಬುದ್ದಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ

ಮೈಸೂರು : ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಬುದ್ದಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಆಸ್ಪತ್ರೆಯ ವಾರ್ಡ್‌ ನ ಕಿಟಕಿಯ ಗ್ರಿಲ್‌ ಮುರಿದು ಒಳನುಗ್ಗಿದ ಅಪರಿಚಿತ ಸುಮಾರು ೩೦ ವರ್ಷದ ಮಹಿಳೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಈ ಕುರಿತು ಆಸ್ಪತ್ರೆಯಲ್ಲಿದ್ದ ವೃದ್ದೆಯೋರ್ವರು ಆಸ್ಪತ್ರೆಯ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ಆದರೆ ಆಸ್ಪತ್ರೆಯ ಸಿಬ್ಬಂದಿ ವೃದ್ದೆಯನ್ನು ಬೆದರಿಸಿ ಬೆದರಿಕೆಯೊಡ್ಡಿದ್ದಾರೆ. ಈ ಮೂಲಕ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಕುರಿತು ಮಾನವ ಹಕ್ಕುಘಲ ಸೇವಾ ಸಮಿತಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ.

ಕೆ.ಆರ್.ಆಸ್ಪತ್ರೆ ಸೂಪರಿಂಟೆಂಡೆಂಟ್ ನಂಜುಂಡಸ್ವಾಮಿ ಮಾತನಾಡಿ, ಅತ್ಯಾಚಾರ ನಡೆದಿರುವ ಬಗ್ಗೆ ಮಾಹಿತಿ ಇರಲಿಲ್ಲ. ಕಳ್ಳತನ ಯತ್ನ ನಡೆದಿದೆ ಅಂತಾ ಹೇಳಲಾಗಿತ್ತು. ಅದೇ ಕಾರಣಕ್ಕೆ ಸುಮ್ಮನಾಗಿದ್ದೆವು. ಇದೀಗ ಪೊಲೀಸರಿಗೆ ದೂರು ನೀಡಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ ಎಂದಿದ್ದಾರೆ.

Comments are closed.