ಮೈಸೂರು ಗ್ಯಾಂಗ್ ರೇಪ್ : ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿಗಳು

ಮೈಸೂರು : ಇತ್ತೀಚೀನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಿದ್ದು. ಅದರಲ್ಲೂ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಂತ ಸಂದರ್ಭದಲ್ಲಿ, ತಾವೇ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಎಂಬುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಇಂದು ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳನ್ನು ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಹಣಕ್ಕೆ ಬೇಡಿಕೆ ಇಟ್ಟಿದ್ದು ತಾವು ಎಂಬುದಾಗಿ ತಪ್ಪೊಪ್ಪಿಕೊಂಡಿರೋದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ : ಐವರು ಆರೋಪಿಗಳ ಬಂಧನ, ಓರ್ವ ಅಪ್ರಾಪ್ತ : ಡಿಜಿ-ಐಜಿಪಿ ಪ್ರವೀಣ್‌ ಸೂದ್

ಆಗಸ್ಟ್ 24ರಂದು ಚಾಮುಂಡೇಶ್ವರಿ ಬೆಟ್ಟದ ತಪ್ಪಲು ಪ್ರದೇಶದ ಲಲಿತಾದ್ರಿಪುರ ತಪ್ಪಲಿನಲ್ಲಿ ಸ್ನೇಹಿತನೊಂದಿಗೆ ತೆರಳಿದ್ದಂತ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚರ ನಡೆದಿತ್ತು. ಈ ಸಂಬಂಧ ಸಂತ್ರಸ್ತೆಯ ಸ್ನೇಹಿತ ಪೊಲೀಸರಿಗೆ ದೂರು ನೀಡಿದ್ದನು. ಈ ಬಳಿಕ ತಮಿಳುನಾಡಿನ ತಿರುಪುರ್ ನಲ್ಲಿ 6 ಆರೋಪಿಗಳ ಪೈಕಿ, ಐವರನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಕತ್ತಲಲ್ಲಿ ಕಾಮುಕರನ್ನು ಸೆರೆ ಹಿಡಿದ ಖಾಕಿ ಪಡೆ : ಆರೋಪಿಗಳ ಸುಳಿವು ಕೊಟ್ಟಿತ್ತು ಬಸ್‌ ಟಿಕೆಟ್‌

Comments are closed.