ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ : ಶಿವಕುಮಾರ್ ಕೊರೊನಾಗೆ ಬಲಿ

ತುಮಕೂರು : ಎಸ್ಎಸ್ಎಲ್ ಸಿ, ಪಿಯುಸಿ, ಪೊಲೀಸ್ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ಶಿವಕುಮಾರ್ ಕೊರೊನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ‌

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಕಾಗ್ಗೆರೆ ಮೂಲದ ಶಿವಕುಮಾರ್ (65 ವರ್ಷ) ಗೆ ಕೊರೊನಾ‌ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮೇ. 16 ರಂದು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿವಕುಮಾರ್ ಸಾವನ್ನಪ್ಲಿದ್ದಾರೆ.

ಎಸ್ಎಸ್ಎಲ್ ಸಿ, ಪಿಯುಸಿ, ಪೊಲೀಸ್ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಅರೋಪವನ್ನು ಎದುರಿಸುತ್ತಿದ್ದ. ಆದರೆ ಕೊರೊನಾ ಹೆಮ್ಮಾರಿ ಆರೋಪಿಯನ್ನು ಬಲಿ ಪಡೆದಿದೆ.

Comments are closed.