Rajasthan murder : ಅಪ್ರಾಪ್ತ ಬಾಲಕಿಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕೊಲೆ

ರಾಜಸ್ಥಾನ : (Rajasthan murder) ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿಯನ್ನು ಕೊಂದು ಆಕೆಯ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿದ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಆರೋಪಿಯನ್ನು ಕಮಲೇಶ್ (20 ವರ್ಷ) ಎಂದು ಗುರುತಿಸಲಾಗಿದ್ದು, ಆತ ಬಾಲಕಿ ಓದುತ್ತಿದ್ದ ಶಾಲೆಯಲ್ಲೇ ಹಳೆ ವಿದ್ಯಾರ್ಥಿಯಾಗಿದ್ದ. ಘಟನೆಗೆ ಸಂಬಂಧಿಸಿದಂತೆ ಇದೀಗ ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಒಂಬತ್ತು ವರ್ಷದ ಅಪ್ರಾಪ್ತ ಬಾಲಕಿಯನ್ನು ಹತ್ಯೆಗೈದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ಘಟನೆ ನಡೆದಿದೆ. ಹತ್ಯೆಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಸಾಧ್ಯತೆ ಕೂಡ ಇದ್ದು, ಇನ್ನೂ ಸಾಬೀತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರದಿಗಳ ಪ್ರಕಾರ, ಮಾರ್ಚ್ 29 ರಿಂದ ಹುಡುಗಿ ಕಾಣೆಯಾಗಿದ್ದಾಳೆ ಮತ್ತು ಶನಿವಾರ ರಾತ್ರಿ ಮಾವ್ಲಿ ಪ್ರದೇಶದ ಪಾಳುಬಿದ್ದ ಮನೆಯಲ್ಲಿ ಆಕೆಯ ದೇಹದ ಭಾಗಗಳು ಪತ್ತೆಯಾಗಿವೆ.

ಪಾಳು ಬಿದ್ದ ಮನೆಯಿಂದ ದುರ್ವಾಸನೆ ಬರುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರು ನೀಡಿದ್ದು, ತನಿಖೆಯ ನಂತರ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಬಾಲಕಿ ಅದೇ ಪ್ರದೇಶದ ಅಕ್ಕಪಕ್ಕದಲ್ಲಿ ವಾಸಿಸುತ್ತಿದ್ದರು. ಆರೋಪಿಯು ಸಂತ್ರಸ್ತೆಯ ಮನೆಯ ಸಮೀಪ ವಾಸಿಸುತ್ತಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಶರ್ಮಾ ತಿಳಿಸಿದ್ದಾರೆ. ಇದೀಗ ಘಟನೆಯ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ದ ಸಂಬಂಧಿತ ಸೆಕ್ಷನ್‌ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗುತ್ತಿದೆ.

ಚಲಿಸುತ್ತಿರುವ ರೈಲಿನಲ್ಲಿ ಪ್ರಯಾಣಿಕರ ನಡುವೆ ಜಗಳ ; ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿ ಪರಾರಿ

ಕೋಝಿಕ್ಕೋಡ್‌ : ಚಲಿಸುತ್ತಿರುವ ರೈಲಿನೊಳಗೆ ಇಬ್ಬರು ಪ್ರಯಾಣಿಕರ ನಡುವೆ ಜಗಳ ನಡೆದಿದ್ದು, ವಾದ ವಿವಾದಗಳ ನಂತರ ವ್ಯಕ್ತಿಯೋರ್ವ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾದ ಘಟನೆ ಕೇರಳದ ಕೋಝಿಕ್ಕೋಡ್‌ನ ಎಲತ್ತೂರ್ ಬಳಿ ನಡೆದಿದೆ. ಘಟನೆಯಲ್ಲಿ ಎಂಟು ಮಂದಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ಚಲಿಸುತ್ತಿರುವ ರೈಲಿನಲ್ಲಿ ಪ್ರಯಾಣಿಕರ ನಡುವೆ ಜಗಳ ; ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿ ಪರಾರಿ

ಕೇರಳದ ಕೋಝಿಕ್ಕೋಡ್‌ನ ಎಲತ್ತೂರ್ ಬಳಿ ಚಲಿಸುತ್ತಿರುವ ರೈಲಿನೊಳಗೆ ಇಬ್ಬರು ಪ್ರಯಾಣಿಕರ ನಡುವೆ ಜಗಳ ನಡೆದಿದ್ದು, ನಂತರ ವ್ಯಕ್ತಿಯೊಬ್ಬ ತನ್ನ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ್ದಾನೆ. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನ ಡಿ 1 ಕಂಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಆರ್‌ಪಿಎಫ್ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲ್ವೇ ಮೂಲಗಳ ಪ್ರಕಾರ, ಘಟನೆಯ ನಂತರ ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದಿದ್ದು, ರೈಲು ನಿಧಾನವಾದಾಗ ಶಂಕಿತ ಆರೋಪಿ ವ್ಯಕ್ತಿ ತಪ್ಪಿಸಿಕೊಂಡಿದ್ದಾನೆ. ರೈಲ್ವೇ ರಕ್ಷಣಾ ಪಡೆಗೆ (ಆರ್‌ಪಿಎಫ್) ಮಾಹಿತಿ ನೀಡಿದ ಇತರ ಪ್ರಯಾಣಿಕರು ಕಂಪಾರ್ಟ್‌ ಮೆಂಟ್‌ ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ. ಅಗತ್ಯ ತಪಾಸಣೆಯ ನಂತರ ರೈಲು ತನ್ನ ಪ್ರಯಾಣವನ್ನು ಮುಂದುವರಿಸಿದೆ.

Rajasthan murder: The body of a minor girl was cut into pieces and killed

Comments are closed.