Road Accident Case‌ : ಕಾರು-ಕ್ಯಾರಿಯರ್ ವಾಹನ ಢಿಕ್ಕಿ 4 ಸಾವು : 6 ಮಂದಿ ಗಾಯ

ಗೋದಾವರಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಕಾರು ಮತ್ತು ಕ್ಯಾರಿಯರ್ ವಾಹನದ (Road Accident Case‌ ) ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ಕಾರಿನ ಚಾಲಕ ಮತ್ತು ಕ್ಯಾರಿಯರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸೇರಿದ್ದಾರೆ.

ಸದ್ಯ ಈ ಅಪಘಾತವು ಪೂರ್ವ ಗೋದಾವರಿ ಜಿಲ್ಲೆಯ ಮಡಿಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪೊಲೀಸರ ಪ್ರಕಾರ, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸರ್ಕಲ್ ಇನ್ಸ್‌ಪೆಕ್ಟರ್ ರಜನಿ ಕುಮಾರ್, “ಬೆಳಿಗ್ಗೆ ಈ ಘಟನೆ ಸಂಭವಿಸಿದೆ. ಕಾರೊಂದು ಕ್ಯಾರಿಯರ್ ವಾಹನಕ್ಕೆ ಡಿಕ್ಕಿ ಹೊಡೆದು ಕಾರು ಚಾಲಕ ಸೇರಿ ನಾಲ್ವರ ಸಾವಿಗೆ ಕಾರಣವಾಯಿತು. .ಮೃತವನ್ನು ಮರಣೋತ್ತರ ಪರೀಕ್ಷೆಗಾಗಿ ಮಂದಪೇಟ ಏರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ : Actress Usha arrest : ಪ್ರಣಯ, ದೋಖಾ ಕನ್ನಡದ ಖ್ಯಾತ ನಟಿ ಉಷಾ ಅರೆಸ್ಟ್‌

ಗಾಯಾಳುಗಳನ್ನು ರಾಜಾಜಿನಗರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಜೂನ್ 11 ರಂದು ಹಾಲಿನ ವ್ಯಾನ್ ಟೆಂಪೋಗೆ ಡಿಕ್ಕಿ :

ಜೂನ್ 11 ರಂದು ಪುತ್ತೂರಿನಿಂದ ತಿರುಪತಿಗೆ ಹೋಗುತ್ತಿದ್ದ ಹಾಲಿನ ವ್ಯಾನ್ ಅಂಜೇರಮ್ಮ ದೇವಸ್ಥಾನದ ಕಡೆಗೆ ಹೋಗುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೃತರನ್ನು ಗಿರ್ಜಮ್ಮ ಮತ್ತು ರೇವಂತ್ ಎಂದು ಗುರುತಿಸಲಾಗಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ನವೀನ್ ಮಾತನಾಡಿ, ‘ತಿರುಪತಿ ಜಿಲ್ಲೆಯ ವಡಮಲಪೇಟೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಪತಿಯಿಂದ ಅಂಜೇರಮ್ಮ ದೇವಸ್ಥಾನಕ್ಕೆ ಹೊರಟಿದ್ದ ಟೆಂಪೋಗೆ ಪುತ್ತೂರಿನಿಂದ ತಿರುಪತಿಗೆ ಹೋಗುತ್ತಿದ್ದ ಹಾಲಿನ ವ್ಯಾನ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.” ಗಾಯಾಳುಗಳನ್ನು ತಿರುಪತಿ ರುಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಟೆಂಪೋ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Road Accident Case: 4 killed in car-carrier collision: 6 injured

Comments are closed.