ಭಾನುವಾರ, ಏಪ್ರಿಲ್ 27, 2025
HomeCoastal Newsಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವೇಳೆ ಅಸಭ್ಯ ವರ್ತನೆ : ಯುವಕನಿಗೆ ಚಪ್ಪಲಿ ಏಟು ಕೊಟ್ಟ...

ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವೇಳೆ ಅಸಭ್ಯ ವರ್ತನೆ : ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ

- Advertisement -

ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳ ಜೊತೆಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವಕನಿಗೆ ವಿದ್ಯಾರ್ಥಿನಿಯೋರ್ವಳು ಚಪ್ಪಲಿಯೇಟು ಕೊಟ್ಟಿರುವ ನಡೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ( Kundapura) ತಾಲೂಕಿನ ವಕ್ವಾಡಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರಕೂರಿನ ನಿವಾಸಿ ನಜೀರ್‌ ( 35 ವರ್ಷ) ಎಂಬಾತನೇ ಯುವತಿಯಿಂದ ಚಪ್ಪಲಿಯೇಟು ತಿಂದ ಯುವಕ. ಬೀಜಾಡಿ – ವಕ್ವಾಡಿ ರಸ್ತೆಯಲ್ಲಿರುವ ಹಾಸ್ಟೆಲ್‌ನಿಂದ ಯುವತಿ ಕಾಲೇಜಿಗೆ ತೆರಳುತ್ತಿದ್ದಳು. ಈ ವೇಳೆಯಲ್ಲಿ ಹಿಂದಿನಿಂದ ಬಂದ ನಜೀರ್‌ ಆಕೆಗೆ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆಯಲ್ಲಿ ವಿದ್ಯಾರ್ಥಿನಿ ಕೂಗಿಕೊಂಡಿದ್ದಾಳೆ. ಈ ವೇಳೆಯಲ್ಲಿ ಸ್ಥಳಕ್ಕೆ ಬಂದ ಸ್ಥಳೀಯರು ಆರೋಪಿಯನ್ನು ಹಿಡಿದು ವಿಚಾರಿಸಿದ ವೇಳೆಯಲ್ಲಿ ವಿದ್ಯಾರ್ಥಿನಿ ವಿಚಾರವನ್ನು ತಿಳಿಸಿದ್ದು, ನಜೀರ್‌ಗೆ ಚಪ್ಪಲಿಯೇಟು ಕೊಟ್ಟಿದ್ದಾಳೆ.

ನಜೀರ್‌ ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಆರೋಪಿಯನ್ನು ಸ್ಥಳೀಯರು ಹಿಡಿದು ಕುಂದಾಪುರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಕಳೆದ ವರ್ಷವಷ್ಟೇ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ ಅನ್ನು ಉದ್ಘಾಟಿಸಲಾಗಿತ್ತು. ಆದರೆ ಈ ಭಾಗದಲ್ಲಿ ಹಾಸ್ಟೆಲ್‌ ಇರುವುದು ವಿದ್ಯಾರ್ಥಿನಿಯರಿಗೆ ಸೇಪ್‌ ಅಲ್ಲಾ ಅನ್ನೋ ಮಾತುಗಳು ಕೇಳಿಬಂದಿದೆ. ಸದ್ಯ ವಿದ್ಯಾರ್ಥಿನಿ ಆರೋಪಿಗೆ ಚಪ್ಪಲಿಯೇಟು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ : Gang rape Bangalore : ಬೆಂಗಳೂರಲ್ಲಿ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಪ್ರಿಯಕರನಿಂದಲೇ ಗ್ಯಾಂಗ್‌ ರೇಪ್‌

ಇದನ್ನೂ ಓದಿ : Student commits suicide : 12 ನೇ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು, ವಾಮಾಚಾರದ ಶಂಕೆ

Rude behavior by youth in Kundapura Student slapped

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular