ನಟಿ ಉಮಾಶ್ರೀ ಮನೆಯಲ್ಲಿ ಕಳವು : ಅಪಾರ ಪ್ರಮಾಣದ ಚಿನ್ನಾಭರಣ ಹೊತ್ತೊಯ್ದ ಶಂಕೆ

ಬಾಗಲಕೋಟೆ : ಸ್ಯಾಂಡಲ್ ವುಡ್ ನ ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಭಾರೀ ಪ್ರಮಾಣದಲ್ಲಿ ಚಿನ್ನಾಭರಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕಳ್ಳರು ಕದ್ದಿರುವ ಶಂಕೆ ವ್ಯಕ್ತವಾಗುತ್ತಿದೆ.

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮನೆ ಕಳ್ಳತನ ನಡೆದಿದೆ. ಮನೆಯ ಬಾಗಿಲು ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು ಅಪಾರ ಪ್ರಮಾಣದಲ್ಲಿ ಬೆಲೆ ಬಾಳುವ ವಸ್ತುಗಳನ್ನು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ.

ರಾತ್ರಿ ಸುಮಾರು 2 ಗಂಟೆಯ ವೇಳೆಯಲ್ಲಿ ಕಳವು ನಡೆದಿದೆ ಎಂದು ಶಂಕಿಸಲಾಗಿದ್ದು, ಸ್ಥಳೀಯರ ಮಾಹಿತಿಯ ಮೇರೆಗೆ ಓರ್ವನಿಂದ ಕಳವು ನಡೆದಿದೆ ಎನ್ನಲಾಗುತ್ತಿದೆ. ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ. ಆದರೆ ಎಷ್ಟು ಪ್ರಮಾಣದಲ್ಲಿ ಕಳವು ನಡೆದಿದೆ ಎನ್ನುವುದು ಖಚಿತವಾಗಿಲ್ಲ.

ಸ್ಥಳೀಯರಿಂದಲೇ ಈ ಕೃತ್ಯ ನೆಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಬನಹಟ್ಟಿ ವೃತ್ತ ನಿರೀಕ್ಷಕ ಕರುಣೇಶ ಗೌಡ ಅವರು ಭೇಟಿ ನೀಡಿ ಪರಿಶೀಲನೆಯನ್ನು ನಡೆದಿದ್ದಾರೆ. ಅಕ್ಕಪಕ್ಕದಲ್ಲಿರುವ ಸಿಸಿ ಕ್ಯಾಮರಾಗಳನ್ನು ಪರಿಶೀಲನೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ತೇರದಾಳ ಠಾಣೆಯ ಪೊಲೀಸರು ತನಿಖೆಯನ್ನು ಚುರುಕುಗೊಳಿಸುತ್ತಿದ್ದಾರೆ.

Comments are closed.