Two youths stabbed in Shimoga : ಸಾವರ್ಕರ್​​​ ಫೋಟೋ ವಿವಾದ : ಶಿವಮೊಗ್ಗದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತ

ಶಿವಮೊಗ್ಗ : Shivamogga Sarvakar Photo Controversy : ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವು ಉದ್ವಿಘ್ನತೆಗೆ ತಿರುಗಿದೆ. ವೀರ ಸಾವರ್ಕರ್​ ಫ್ಲೆಕ್ಸ್​ ಅಳವಡಿಕೆ ವಿಚಾರದಲ್ಲಿ ಎರಡು ಕೋಮಿನ ಯುವಕರ ನಡುವೆ ಭಾರೀ ಗಲಾಟೆ ಏರ್ಪಟ್ಟಿದ್ದು ಪರಿಸ್ಥಿತಿ ಕಾವೇರುತ್ತಿದೆ. ಈ ನಡುವೆ ನಗರದ ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದ್ದು ಇಡೀ ಶಿವಮೊಗ್ಗದಲ್ಲಿ ಪರಿಸ್ಥಿತಿ ಬಹಳಷ್ಟು ಸೂಕ್ಷ್ಮವಾಗಿದೆ.


ಶಿವಮೊಗ್ಗದ ಅಮೀರ್​ ಅಹಮದ್​ ವೃತ್ತದಲ್ಲಿ ಎರಡು ಕೋಮಿನ ನಡುವೆ ಗಲಾಟೆ ಏರ್ಪಟ್ಟಿದ್ದು ಸಾರ್ವಕರ್​ ಫೋಟೋವನ್ನು ತೆಗೆದು ಟಿಪ್ಪು ಸುಲ್ತಾನ್​ರ ಫೋಟೋವನ್ನು ಇಡಲು ಒಂದು ಗುಂಪು ಮುಂದಾಗಿತ್ತು. ಸಾರ್ವಕರ್​ ಫೋಟೋವನ್ನು ತೆಗೆಯಲು ಒಪ್ಪಿದ ಪೊಲೀಸರು ಟಿಪ್ಪು ಫೋಟೋವನ್ನು ಇಡಲು ನಿರಾಕರಿಸಿದ್ದರು. ಈ ವೇಳೆಯಲ್ಲಿ ಎರಡು ಕೋಮಿನ ಜೊತೆಯಲ್ಲಿ ಜಟಾಪಟಿ ಉಂಟಾಗಿದೆ. ವೀರ ಸಾರ್ವಕರ್​ ಫೋಟೋವನ್ನು ತೆರವುಗೊಳಿಸಿದ್ದಕ್ಕೆ ಆಕ್ರೋಶಗೊಂಡಿರುವ ಹಿಂದೂಪರ ಸಂಘಟನೆ ಕಾರ್ಯ

ಕರ್ತರು ಶಿವಪ್ಪ ನಾಯಕ ವೃತ್ತದಲ್ಲಿ ಗುಂಪು ಸೇರಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಟಿಯರ್​ ಗ್ಯಾಸ್​ ಸಿಡಿಸಲು ಮುಂದಾಗಿದ್ದಾರೆ. ಬಿಜೆಪಿ ನಗರಾಧ್ಯಕ್ಷ ಜಗದೀಶ್, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚೆನ್ನಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು ಪೊಲೀಸರು ಹಾಗೂ ಪ್ರತಿಭಟನಾನಿರತರ ನಡುವೆ ಮಾತಿನ ಚಕಮಕಿ ಉಂಟಾಗಿದೆ.


ಶಿವಮೊಗ್ಗದಲ್ಲಿ ವೀರ ಸಾರ್ವಕರ್​ ಫೋಟೋ ವಿಚಾರವಾಗಿ ಗಲಾಟೆ ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಯುವಕರ ಮೇಲೆ ಚಾಕು ಇರಿತವಾಗಿದೆ. ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ ಪ್ರೇಮ್​ ಸಿಂಗ್​ ಎಂಬವನ ಮೇಲೆ ಚಾಕು ಇರಿತವಾದ ಬೆನ್ನಲ್ಲೇ ಇದೀಗ ಅಶೋಕನಗರ ಬಡಾವಣೆಯಲ್ಲಿ ಮತ್ತೊಬ್ಬ ಯುವಕನಿಗೆ ಚಾಕು ಇರಿಯಲಾಗಿದೆ. ಅಂಗಡಿ ಬಾಗಿಲು ಮುಚ್ಚಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು 27 ವರ್ಷದ ಪ್ರವೀಣ್​ ಕುಮಾರ್​ ಎಂಬವರ ಮೇಲೆ ಚಾಕು ಇರಿತ ಮಾಡಿದ್ದಾರೆ. ದುಷ್ಕರ್ಮಿಗಳು ಪ್ರವೀಣ್​ ಕುಮಾರ್​ಗೆ ಚಾಕು ಚುಚ್ಚಿ ಪರಾರಿಯಾಗಿದ್ದಾರೆ. ಪ್ರವೀಣ್​ ಕುಮಾರ್​ ಹಾಗೂ ಪ್ರೇಮ್​ ಸಿಂಗ್​​​ರಿಬ್ಬರನ್ನೂ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಇದನ್ನು ಓದಿ : Riot over Sarvakar photo : ವೀರ ಸಾರ್ವಕರ್​ ಭಾವಚಿತ್ರ ಇಡುವ ವಿಚಾರಕ್ಕೆ ಮತ್ತೆ ಕಿರಿಕ್​ , ಯುವಕನಿಗೆ ಚಾಕು ಇರಿತ

ಇದನ್ನೂ ಓದಿ : Cricketers celebrates Independence Day: 75ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದ ಕ್ರಿಕೆಟಿಗರು

Sarvakar Photo Controversy : Two youths stabbed in Shivamogga

Comments are closed.