ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕಿರುಕುಳ: ಕಾಮುಕ ಶಿಕ್ಷಕನಿಗೆ ಧರ್ಮದೇಟು

ಮಂಡ್ಯ: (Sexual assault on students) ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಕಾಮುಕ ಶಿಕ್ಷಕನಿಗೆ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ವಸತಿ ನಿಲಯದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ತೋರಿದಕ್ಕೆ ಶಿಕ್ಷಕನಿಗೆ ಧರ್ಮದೇಟು ಸಿಕ್ಕಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿ ಈ ಘಟನೆ (Sexual assault on students) ನಡೆದಿದ್ದು, ಚಿನ್ಮಯ್‌ ಆನಂದ ಮೂರ್ತಿ ಎನ್ನುವವನೇ ಥಳಿತಕ್ಕೊಳಗಾದ ಕಾಮುಕ ಶಿಕ್ಷಕ. ತಡರಾತ್ರಿಯಲ್ಲಿ ಆರ್‌ಎಮ್‌ಎಸ್‌ವಿ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕಾಮುಕ ಶಿಕ್ಷಕ ಕಿರುಕುಳ ನೀಡುತ್ತಿದ್ದನು. ಕೊಠಡಿಗೆ ವಿದ್ಯಾರ್ಥಿನಿಯರನ್ನು ಕರೆಸಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದನು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಇದನ್ನು ಯಾರಿಗೂ ಹೇಳದಂತೆ ಬೆದರಿಕೆ ಕೂಡ ಒಡ್ಡುತ್ತಿದ್ದನಂತೆ.

ಆತನ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೈಯಲ್ಲಿ ದೊಣ್ಣೆಯನ್ನು ಹಿಡಿದು ಕಿರುಕುಳ ನೀಡುತ್ತಿದ್ದ ಕಾಮುಕನಿಗೆ ವಿದ್ಯಾರ್ಥಿನಿಯರು ಧರ್ಮದೇಟು ನೀಡಿದ್ದಾರೆ. ವಿದ್ಯಾರ್ಥಿನಿಯರನ್ನು ಕರೆಸಿ ಅವರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ.

ವಿಷಯ ತಿಳಿದ ಕೆಆರ್‌ ಎಸ್‌ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಕಾಮುಕ ಶಿಕ್ಷಕನನ್ನು ವಶಕ್ಕೆ ಪಡೆದಿದ್ದಾರೆ. ಕಾಮುಕನ ವಿರುದ್ದ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : Student died: ಶಾಲೆಯಲ್ಲಿ ನೇಣು ಬಿಗಿದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಇದನ್ನೂ ಓದಿ : Thumkur accident: ಕ್ಯಾಂಟರ್‌ ಗೆ ಕಾರು ಢಿಕ್ಕಿ: ನಾಲ್ವರು ಸಾವು

ಇದನ್ನೂ ಓದಿ : Liquor tragedy: ಬಿಹಾರದಲ್ಲಿ ಕಳ್ಳಭಟ್ಟಿ ದುರಂತಕ್ಕೆ 20 ಮಂದಿ ಬಲಿ; ವಿಧಾನಸಭೆಯಲ್ಲಿ ಚರ್ಚೆ, ಪ್ರತಿಪಕ್ಷಗಳ ಗದ್ದಲ

(Sexual assault on students) In the background of harassing the female students of the hostel, an incident of sexual assault of a teacher with a stick took place in Mandya. A teacher has been reprimanded for misbehaving with female students of the hostel

Comments are closed.