ಶಿವಮೊಗ್ಗ : Background of main accused Nadeem : ಇಷ್ಟು ದಿನ ಗಲಾಟೆ – ಸಂಘರ್ಷಗಳು ಅಂದರೆ ದಕ್ಷಿಣ ಕನ್ನಡ ಜಿಲ್ಲೆ ಹೆಸರು ಮೊದಲು ಕೇಳಿ ಬರ್ತಿದೆ. ಆದರೆ ಇದೀಗ ಈ ಸಾಲಿಗೆ ಶಿವಮೊಗ್ಗ ನಗರ ಸೇರಿಕೊಂಡಿದೆ. ನಿನ್ನೆ ದೇಶದ ಸ್ವಾತಂತ್ರ್ಯ ದಿನಾಚರಣೆಯಂದು ವೀರ ಸಾವರ್ಕರ್ ಫೋಟೋ ಅಳವಡಿಕೆ ವಿಚಾರದಲ್ಲಿ ನಡೆದ ಗಲಾಟೆಯು ಇಬ್ಬರು ವ್ಯಕ್ತಿಗಳ ಮೇಲೆ ಚಾಕು ಇರಿತ ಮಾಡುವವರೆಗೂ ಹೋಗಿದೆ. ಫ್ಲೆಕ್ಸ್ ಅಳವಡಿಕೆ ವಿಚಾರದಲ್ಲಿ ಗಲಾಟೆ ಉಂಟಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ರಾತ್ರೋರಾತ್ರಿ ನಗರದಲ್ಲಿನ ಎಲ್ಲಾ ಫ್ಲೆಕ್ಸ್ಗಳನ್ನು ತೆರವುಗೊಳಿಸಿದೆ.
ಇನ್ನು ಶಿವಮೊಗ್ಗ ಜಿಲ್ಲೆಯ ಗಾಂಧಿ ಬಜಾರ್ ಬಟ್ಟೆ ಅಂಗಡಿಯನ್ನು ಹೊಂದಿದ್ದ ಪ್ರೇಮ್ ಸಿಂಗ್ ಮೇಲೆ ಚಾಕು ಇರಿತ ಮಾಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25)ರನ್ನು ಪೊಲೀಸರು ಬಂಧಿಸಿದ್ದಾರೆ.
ಅಂದಹಾಗೆ ಪ್ರೇಮ್ಸಿಂಗ್ಗೆ ಚಾಕು ಇರಿದ ನದೀಮ್ ಹಿಂದೆ ಒಂದು ಕರಾಳ ಇತಿಹಾಸವಿದೆ. 2016ರಲ್ಲಿ ಶಿವಮೊಗ್ಗದಲ್ಲಿ ಇದೇ ರೀತಿಯಲ್ಲಿ ಕೋಮು ಗಲಭೆ ಉಂಟಾಗಿತ್ತು. ಈ ಕೋಮು ಗಲಭೆಯಲ್ಲಿಯೂ ಇದೇ ನದೀಮ್ ಪ್ರಮುಖ ಪಾತ್ರ ವಹಿಸಿದ್ದ. 2016ರ ಗಣೇಶೋತ್ಸವದ ಸಂದರ್ಭದಲ್ಲಿ ಈತ ಕಲ್ಲು ತೂರಾಟ ಹಾಗೂ ಚಪ್ಪಲಿ ತೂರಾಟ ನಡೆಸಿದ್ದ. ಈ ಮೂಲಕ ಗಲಭೆ ಹೆಚ್ಚಾಗಲು ನದೀಮ್ ಕಾರಣನಾಗಿದ್ದ. ಇದೀಗ ಚಾಕು ಇರಿತದ ಮೂಲಕ ಮತ್ತೆ ಕೋಮು ಗಲಭೆ ಸೃಷ್ಟಿಸಲು ಈ ನದೀಮ್ ಯತ್ನಿಸಿದ್ದಾನೆ.
ಇನ್ನು ಗಾಂಧಿ ಬಜಾರ್ನಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿತ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಾರ್ನಾಮಿಬೈಲ್ ನ ಜಬೀವುಲ್ಲಾ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿಯ ನಮೋ ಶಂಕರ ಲೇಔಟ್ನಲ್ಲಿ ಪೊಲೀಸರು ಜಬೀವುಲ್ಲಾ ಕಾಲಿಗೆ ಗುಂಡೇಟು ಹಾರಿಸಿದ್ದಾರೆ. ಆರೋಪಿಯ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ : cleared all flexes in shivamogga : ಶಿವಮೊಗ್ಗ ಗಲಾಟೆ ಪ್ರಕರಣ : ನಗರಾದ್ಯಂತ ಎಲ್ಲಾ ಫ್ಲೆಕ್ಸ್ಗಳನ್ನು ತೆರವುಗೊಳಿಸಿದ ಪಾಲಿಕೆ
ಇದನ್ನೂ ಓದಿ : Bigg Boss Ott Kannada Season 1 : ಸೋನುಗೌಡಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ
Shivamogga riot case: Background of main accused Nadeem
Comments are closed.