Student Death : ಹೊಳೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ಸುಳ್ಯ : ಹೊಳಗೆ ಸ್ನಾನಕ್ಕೆ ತೆರಳಿದ್ದ ಶಾಲಾ ಬಾಲಕನೋರ್ವ (Student Death) ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ‌ಸುಳ್ಯ ಸಮೀಪದ ಕುಕ್ಕುಂಬಳ ಹೊಳೆಯಲ್ಲಿ ನಡೆದಿದೆ. ಮಂಗಳೂರಿನ ಮನ್ವಿತ್ ( 12 ವರ್ಷ ) ಮೃತ ಬಾಲಕ ಎಂದು ತಿಳಿದು ಬಂದಿದೆ.

ಶಾಲೆಗೆ ರಜೆ ಇದ್ದ ಕಾರಣದಿಂದಾಗಿ ಮಂಗಳೂರಿನಿಂದ ಸುಳ್ಯದಲ್ಲಿರುವ ತನ್ನ ಅಜ್ಜಿಯ ಮನೆಗೆ ಮನ್ವಿತ್‌ ಬಂದಿದ್ದಾನೆ. ಸಂಜೆಯ ವೇಳೆಯಲ್ಲಿ ಮತ್ತೋರ್ವ ಬಾಲಕನ ಜೊತೆಗೆ ಸ್ನಾನ ಮಾಡಲು ಕುಕ್ಕುಂಬಳ ಹೊಳೆಗೆ ಬಂದಿದ್ದಾರೆ. ಹೊಳೆಯಲ್ಲಿ ಆಡವಾಡುತ್ತಿದ್ದ ವೇಳೆಯಲ್ಲಿ ಮನ್ವಿತ್‌ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

ಮತ್ತೋರ್ವ ಬಾಲಕ ಘಟನೆಯನ್ನು ಮನೆಯವರಿಗೆ ತಿಳಿಸಿದ್ದಾನೆ. ಕೂಡಲೇ ಮನೆಯವರು ಹಾಗೂ ಸ್ಥಳೀಯರು ಸೇರಿಕೊಂಡು ಬಾಲಕನ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮನ್ವಿತ್ ಪ್ರಾಣ ಪಕ್ಷಿ ಹಾಕಿ ಹೋಗಿತ್ತು. ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.

ಇದನ್ನೂ ಓದಿ : ಕಣ್ಣಾ ಮುಚ್ಚಾಲೆ ಆಡುತ್ತಾ ಐಸ್​ಕ್ರೀಂ ಬಾಕ್ಸಿನಲ್ಲಿ ಅವಿತುಕೊಳ್ಳಲು ಹೋದ ಬಾಲಕಿಯರು ಸಾವು

ಇದನ್ನೂ ಓದಿ : 6 ರಿಂದ 12 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ : ಸಿಎಂ ಬೊಮ್ಮಾಯಿ ಘೋಷಣೆ

Student Death in Kukkumbal River Sullia near Mangalore

Comments are closed.