Student rape and murder: ವಿದ್ಯಾರ್ಥಿನಿ ಮೇಲೆ ಕಾಲೇಜು ಪ್ರಾಂಶುಪಾಲನಿಂದ ಅತ್ಯಾಚಾರ, ಕೊಲೆ ಆರೋಪ; ಪೋಷಕರಿಂದ ಆಕ್ರೋಶ

ರಾಯಚೂರು: (Student rape and murder) ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲನೋರ್ವ ಅತ್ಯಾಚಾರವೆಸಗಿ ಕೊಲೆ ಮಾಡಿ ನಂತರ ಶವವನ್ನು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಎಂಬಲ್ಲಿ ನಡೆದಿದೆ. ಆರೋಪಿ ಪ್ರಾಂಶುಪಾಲರ ವಿರುದ್ದ ಇದೀಗ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸರ್ ಎಂ ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಐಶ್ವರ್ಯ (17 ವರ್ಷ ) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿದ್ಯಾರ್ಥಿನಿ. ಕಾಲೇಜಿನ ಪ್ರಾಂಶುಪಾಲ ರಮೇಶ್ ಎಂಬಾತನ ವಿರುದ್ದ ಇದೀಗ ಅತ್ಯಾಚಾರ, ಕೊಲೆ ಆರೋಪ ಕೇಳಿಬಂದಿದೆ.  ವಿದ್ಯಾರ್ಥಿನಿ ಐಶ್ವರ್ಯಳನ್ನು ಕೊಲೆ ಮಾಡಿ  ನಂತರ ತನ್ನ ವಿರುದ್ಧ ಆರೋಪ ಬರಬಾರದು ಅನ್ನೋ ಕಾರಣಕ್ಕೆ ಆಕೆಯ ಶವವನ್ನು ಹಾಸ್ಟೆಲ್​ ಕೊಠಡಿಯಲ್ಲಿ ನೇಣಿಗೆ ಹಾಕಿದ್ದಾರೆ ಎಂದು ಮೃತ ವಿದ್ಯಾರ್ಥಿನಿ ಫೋಷಕರು, ಸಂಬಂಧಿಕರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಿಕರು, ಪೋಷಕರು ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಐಶ್ವರ್ಯ, ವಿಸಿಬಿ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ವಾಸವಿದ್ದಳು. ಆಗಾಗ ಪ್ರಾಂಶುಪಾಲ ತನ್ನ ರೂಮಿಗೆ  ಕರೆಸಿಕೊಳ್ಳುತ್ತಿದ್ದನಂತೆ. ಹೀಗಾಗಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ ಪ್ರಾಂಶುಪಾಲರೇ ಕೊಲೆ ಮಾಡಿ ನೇಣು ಹಾಕಿದ್ದಾರೆ  ಎಂಬ ಆರೋಪ ಕೇಳಿಬಂದಿದೆ. ಇನ್ನು ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲ ರಮೇಶ್ ವಿರುದ್ದ  ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ : Dehli Gang rape: 3 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳು ಅರೆಸ್ಟ್‌

3 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳು ಅರೆಸ್ಟ್‌

ನವದೆಹಲಿ: ಮೂರು ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಫತೇಪುರ್ ಬೆರಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇದೀಗ ಘಟನೆಯ ಕುರಿತು ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ : Mangalore Murder : ಹಾಡಹಗಲೇ ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯನ್ನು ಚೂರಿ ಇರಿದು ಬರ್ಬರ ಹತ್ಯೆ

ಇದನ್ನೂ ಓದಿ : Assault on parking Attendant: ಶುಲ್ಕ ಪಾವತಿಸುವಂತೆ ಕೇಳಿದ ಪಾರ್ಕಿಂಗ್ ಅಟೆಂಡೆಂಟ್ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

Student rape and murder: A student accused of rape and murder by the college principal; Outrage from parents

Comments are closed.