ಮಂಗಳವಾರ, ಏಪ್ರಿಲ್ 29, 2025
HomeCrimeಉಪನ್ಯಾಸಕರಿಂದ ಅವಮಾನ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ!

ಉಪನ್ಯಾಸಕರಿಂದ ಅವಮಾನ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ!

- Advertisement -

ಉಡುಪಿ : ಕಾಲೇಜಿನ ಉಪನ್ಯಾಸಕರು ತನಗೆ ಅವಮಾನ ಮಾಡಿದ್ರು ಅನ್ನೋ ಕಾರಣಕ್ಕೆ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ. ಚರಣ್ ಶೆಟ್ಟಿ (19 ವರ್ಷ) ಆತ್ಮ ಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹೆಬ್ರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಚರಣ್ ಸರಿಯಾಗಿ ತರಗತಿಗಳಿಗೆ ಹಾಜರಾಗುತ್ತಿರಿಲ್ಲ, ಈ ಕುರಿತು ಉಪನ್ಯಾಸರು ಈತನ ನಡವಳಿಕೆ ಬದಲಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ.

ಮಾತ್ರವಲ್ಲ ತರಗತಿಗೆ ಹಾಜರಾಗದೇ ಇರೋದ್ರಿಂದಾಗಿ ಪರೀಕ್ಷೆಗೆ ಹಾಜರಾಗಲು ಹಾಜರಾತಿಯ ಕೊರತೆ ಉಂಟಾಗಿತ್ತು. ಈ ಕುರಿತು ಕಾಲೇಜಿನ ಪ್ರಾಂಶುಪಾಲರು ಎಚ್ಚರಿಕೆಯನ್ನೂ ನೀಡಿದ್ದಾರೆ. ಆದ್ರೆ ಮಧ್ಯಾಹ್ನ ಕಾಲೇಜಿನಿಂದ ಮನೆಗೆ ಆಗಮಿಸಿದ್ದ ಚರಣ್ ಮನೆಯಲ್ಲಿ ಬ್ಯಾಗ್ ಇಟ್ಟು ಮೈರ್ಕೊಮೆ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣಿಗೆ ಕೊರಳೋಡ್ಡಿದ್ದಾನೆ. ಸಾಯೋದಕ್ಕೂ ಮೊದಲು ಸ್ನೇಹಿತನ ಮೊಬೈಲ್ ಗೆ ಕಾಲೇಜಿನ ಉಪನ್ಯಾಸಕರಿಂದ ತನಗೆ ಅವಮಾನವಾಗಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತಾ ತಿಳಿಸಿದ್ದ.

ಇದೀಗ ಚರಣ್ ತಂದೆ ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯ ಪೊಲೀಸರು ಕಾಲೇಜಿನ ಮೂವರು ಉಪನ್ಯಾಸಕರ ವಿರುದ್ದ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಆದ್ರೆ ವಿದ್ಯಾರ್ಥಿಯ ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಪೊಲೀಸರು ಸಮಗ್ರ ತನಿಖೆ ನಡೆಸುವಂತೆ ಶರಣ್ ಶೆಟ್ಟಿ ಫೋಷಕರು ಆಗ್ರಹಿಸುತ್ತಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular