ಹೆಬ್ರಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ತಾಯಿ, ಮಗಳ ಮೃತದೇಹ ಪತ್ತೆ : ಕೊಲೆ ಶಂಕೆ

ಹೆಬ್ರಿ : ಮನೆಯೊಂದರಲ್ಲಿ ತಾಯಿ ಹಾಗೂ ಮಗಳ ಮೃತ ದೇಹ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಆತ್ರಾಡಿ ಗ್ರಾ.ಪಂ. ವ್ಯಾಪ್ತಿಯ ಮದಗ ಅಂಗನವಾಡಿ ಬಳಿಯಲ್ಲಿ ನಡೆದಿದೆ. ತಾಯಿ, ಮಗಳನ್ನು(mother daughter body found) ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆಂಧ್ರ ಮೂಲದ ಚೆಲುವಿ ( 28 ವರ್ಷ ) ಮತ್ತಾಕೆಯ ಮಗಳು ಪ್ರಿಯಾ (10 ವರ್ಷ ) ಮೃತ ದುರ್ದೈವಿಗಳು. ಚೆಲುವಿಯ ತಾಯಿ ಹಾಗೂ ಮಗ ಭದ್ರಾವತಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ತಾಯಿ ಮಗಳು ಮಾತ್ರವೇ ವಾಸವಾಗಿದ್ದರು. ತಾಯಿ ಮಗಳಿಗೆ ಕರೆ ಮಾಡಿದಾಗ ಪೋನ್‌ ಸ್ವಿಚ್‌ ಆಫ್‌ ಆಗಿತ್ತು. ಪಕ್ಕದ ಮನೆಯಲ್ಲಿ ವಿಚಾರಿಸಿದಾಗ, ಬಾಗಿಲು ತೆರೆದು ನೋಡಿದ್ದಾರೆ. ಈ ವೇಳೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಚೆಲುವಿಯ ಮೂಗು ಹಾಗೂ ಬಾಯಿಯಲ್ಲಿ ರಕ್ತದ ಗುರುತು ಪತ್ತೆಯಾಗಿದ್ದು, ಮಗುವಿನ ಕುತ್ತಿಗೆ ಹಿಸುಕಿರುವ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ಸಿದ್ದಲಿಂಗಪ್ಪ, ಡಿವೈಎಸ್‌ಪಿ ಸುಧಾಕರ್‌ ನಾಯಕ್‌ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಯಿಸಿ ಪರಿಶೀಲನೆ ನಡೆಸಲಾಗಿದೆ. ಹಿರಿಯಡ್ಕ ಠಾಣೆಯ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಈ ಕೊಲೆ ನಡೆಸಲಾಗಿದೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಬ್ರಿಯಲ್ಲಿ ನಡೆದಿರುವ ತಾಯಿ, ಮಗಳ ಕೊಲೆ ಪ್ರಕರಣ ಜನತೆಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

ಚೆಲುವೆ ಹದಿನೈದು ವರ್ಷದ ಹಿಂದೆ ಮಂಚಿಯ ಸುಬ್ರಹ್ಮಣ್ಯ ಎಂಬವರನ್ನು ಮದುವೆಯಾಗಿದ್ದರು. ಆದರೆ ಚೆಲುವಿಗೆ ರಶೀದ್‌ ಎಂಬಾತನ ಪರಿಚಯವಾಗಿದ್ದು, ಇದೇ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಮನಸ್ಥಾಪ ಉಂಟಾಗಿತ್ತು. ಸುಬ್ರಹ್ಮಣ್ಯ ಇದೇ ವಿಚಾರವಾಗಿ ಪತ್ನಿಯನ್ನು ತೊರೆದಿದ್ದ. ಹೀಗಾಗಿ ಎರಡು ವರ್ಷಗಳ ಕಾಲ ರಶೀದ್‌ ಜೊತೆಗೆ ಮುಂಬೈಗೆ ತೆರಳಿದ್ದ ಚೆಲುವಿ ನಂತರದಲ್ಲಿ ಕಾರ್ಕಳಕ್ಕೆ ಬಂದು ಪತಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ನಂತರದಲ್ಲಿಯೂ ಪತಿಯ ಜೊತೆಗೆ ಮನಸ್ಥಾಪ ಮಾಡಿಕೊಂಡು ಆತ್ರಾಡಿಯಲ್ಲಿನ ತನ್ನ ತಾಯಿಯ ಮನೆಯಲ್ಲಿ ಮಕ್ಕಳೊಂದಿಗೆ ವಾಸವಾಗಿದ್ದಳು.

ಇದನ್ನೂ ಓದಿ : ಸರ್ಕಾರಿ ಬಸ್​ಗೆ ಕಾರು ಡಿಕ್ಕಿ : ಭಯಾನಕ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಮೂವರು ಸಾವು

ಇದನ್ನೂ ಓದಿ : ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್​ : ನಾಲ್ವರ ಸ್ಥಿತಿ ಗಂಭೀರ

suspicious mother daughter body found in Hebri

Comments are closed.