Terrible Accident Between Cars : ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಭೀಕರ ಅಪಘಾತ : 5 ಮಂದಿ ಸಾವು, ಮೂವರು ಗಂಭೀರ

ನಾಗಮಂಗಲ : ರಾಷ್ಟ್ರೀಯ ಹೆದ್ದಾರಿ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ (Terrible Accident Between Cars) ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತ ಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಎ. ನಾಗತಿಹಳ್ಳಿ ಬಳಿ ಬೆಂಗಳೂರು ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಎರಡು ಕಾರುಗಳು ಮುಖಾಮುಖಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮದುವೆ ಸಮಾರಂಭ ಮುಗಿಸಿಕೊಂಡು ಹಾಸನ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಜಕಕ್ಕೆ ಅಪ್ಪಳಿಸಿ ಹಾಸನದಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದ ಸ್ವಿಫ್ಟ್‌ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರುಗಳು ಎರಡು ಮುಖಾಮುಖಿ ಆದ ರಭಸಕ್ಕೆ ನೂಜುಗುಜ್ಜಾಗಿದೆ.

ಇದನ್ನೂ ಓದಿ : Mumbai bus accident: ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಬಸ್‌ ಪಲ್ಟಿ: ಇಬ್ಬರು ವಿದ್ಯಾರ್ಥಿಗಳು ಸಾವು

ಇದನ್ನೂ ಓದಿ : Couple hacked to death : ವಾಮಾಚಾರ ಶಂಕೆ :ದಂಪತಿಯನ್ನು ಕಡಿದು ಹತ್ಯೆ

ಇದನ್ನೂ ಓದಿ : Harassment: ಊಟದಲ್ಲಿ ಕೂದಲು ಸಿಕ್ಕಿದ್ದಕ್ಕೆ ಪತ್ನಿಯ ತಲೆ ಬೋಳಿಸಿದ ಸೈಕೋ ಪತಿ; ಅತ್ತೆ-ಮಾವ ಕೂಡಾ ಸಾಥ್..!

ಇದನ್ನೂ ಓದಿ : Student rape: ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಂದ ಹೀನಾಯ ಕೃತ್ಯ; ಅಮಲು ಪದಾರ್ಥ ನೀಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ

ಇದನ್ನೂ ಓದಿ : Mangaluru car accident: ಆಟವಾಡುತ್ತಿದ್ದ ಮಕ್ಕಳಿಗೆ ಕಾರು ಡಿಕ್ಕಿ: 7 ಮಕ್ಕಳಿಗೆ ಗಾಯ

Terrible Accident Between Cars : ಅಪಘಾತದಲ್ಲಿ ಮರಣ ಹೊಂದಿದವರ ವಿವರ :

ಇದರ ಪರಿಣಾಮವಾಗಿ ಎರಡು ಕಾರುಗಳಲ್ಲಿದ್ದ ಹಾಸನ ಮೂಲದ ಶ್ರೀನಿವಾಸ ಮೂರ್ತಿ 74ವರ್ಷ, ಪ್ರಭಾಕರ್‌ 75ವರ್ಷ, ಜಯಂತಿ 60ವರ್ಷ, ಚೈನೈ ಮೂಲದ ಕಿಶೋರ್‌ 25ವರ್ಷ, ಸೇರಿದಂತೆ ಒಟ್ಟು ಐದು ಮಂದಿ ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಇನ್ನೂ ಗಂಭೀರವಾಗಿ ಗಾಯಗೊಂಡ ಗೌತಮ್‌, ಕೆವಿನ್‌, ಶಬ್ರೀಶ್‌ ಹಾಗೂ ಮತ್ತಿಬ್ಬರು ಆದಿ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಿಂಡಿಗನವಿಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Terrible Accident Between Cars on Bangalore-Mangalore National Highway: 5 killed, 3 seriously

Comments are closed.