Terrible accident: ಕಾರು ಲಾರಿ ಭೀಕರ ಅಪಘಾತ :3 ಸಾವು, ಓರ್ವ ಗಂಭೀರ

ಶಿವಮೊಗ್ಗ: (Terrible accident) ಲಾರಿ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಬಳಿಯಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿವೇಕ(21 ವರ್ಷ), ಕಾರ್ತಿಕ್‌(21 ವರ್ಷ), ಹಾಗೂ ಮೋಹನ್‌(21 ವರ್ಷ) ಎಂಬವರೇ ಅಪಘಾತ(Terrible accident)ದಲ್ಲಿ ಸಾವನ್ನಪ್ಪಿರುವ ದುರ್ದೈವಿಗಳು. ಇನ್ನು ಕಾರಿನಲ್ಲಿದ್ದ ರುದ್ರೇಶ್ ಎಂಬವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದಿಂದ ಸವಳಂಗ ಕಡೆಗೆ ಕಾರು ತೆರಳುತ್ತಿತ್ತು. ಇದೇ ವೇಳೆಯಲ್ಲಿ ಸವಳಂಗದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತ ನಡೆಯುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಶಿವಮೊಗ್ಗ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : Attack on boys: ಬೈಂದೂರು ಯುವಕರ ಮೇಲಿನ ಹಲ್ಲೆ ಪ್ರಕರಣ: ಸುಪಾರಿ ಕೊಟ್ಟ ಅಂಗಡಿ ಮಾಲೀಕ ಅರೆಸ್ಟ್

ಇದನ್ನೂ ಓದಿ : Attack on boys: ಬೈಂದೂರು ಯುವಕರ ಮೇಲಿನ ಹಲ್ಲೆ ಪ್ರಕರಣ: ಸುಪಾರಿ ಕೊಟ್ಟ ಅಂಗಡಿ ಮಾಲೀಕ ಅರೆಸ್ಟ್

ಇದನ್ನೂ ಓದಿ : Kidnap Case: ಮನೆಗೆ ನುಗ್ಗಿ ಯುವತಿಯನ್ನು ಅಪಹರಿಸಿದ 100 ಜನ ಯುವಕರ ಗುಂಪು: ವಿಡಿಯೋ ವೈರಲ್‌

ಇದನ್ನೂ ಓದಿ : Crime: ಗೆಳೆಯರೊಂದಿಗೆ ಪತ್ನಿಯನ್ನು ಮಲಗಿಸಿ ವೀಡಿಯೋ ಮಾಡುತ್ತಿದ್ದ ಗಂಡನಿಗೆ ನಾದಿನಿಯೂ ಬೇಕಂತೆ !

(Terrible accident) The incident took place in the early morning near Kallapura in Shimoga taluk when a lorry and a car collided head-on and the three occupants of the car died on the spot. A person was seriously injured in the accident and was admitted to Megan Hospital in Shimoga.

Comments are closed.