Truck accident-7 died: ರಸ್ತೆಬದಿಯಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಹರಿದ ಟ್ರಕ್:‌ 7 ಮಂದಿ ಸಾವು

ಲಖಿಂಪುರ ಖೇರಿ: (Truck accident-7 died) ರಸ್ತೆಬದಿಯಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಟ್ರಕ್ ಹರಿದ ಪರಿಣಾಮ ಲಖಿಂಪುರ ಖೇರಿ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆಯ ದಿನ ಕಾರು ಮತ್ತು ಸ್ಕೂಟರ್‌ ನಡುವೆ ಢಿಕ್ಕಿ ಸಂಭವಿಸಿದ ನಂತರ ಟ್ರಕ್‌ ಚಾಲಕನೋರ್ವ ವಾಹನದ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ.

ಶನಿವಾರ ಕಾರು ಮತ್ತು ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದ್ದು, ಅದೇ ಸಮಯದಲ್ಲಿ ಅದೇ ಸ್ಥಳದ ಹತ್ತಿರ ಟ್ರಕ್‌ ಚಾಲಕನೋರ್ವ ವಾಹನದ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಹರಿದಿದೆ. ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ರೋಹಿತ್ ಕುಮಾರ್ ಎಂದು ಗುರುತಿಸಲಾದ 17 ವರ್ಷದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಪಾಂಗಿ ಖುರ್ದ್ ಗ್ರಾಮದ ನಿವಾಸಿಗಳಾಗಿದ್ದು, ಕರಣ್ ಕುಮಾರ್ (14), ಪಾರಸ್ (85), ರಿಜ್ವಾನ್ (16), ಕರುಣೇಶ್ ವರ್ಮಾ (35) ಮತ್ತು ವೀರೇಂದ್ರ ಕುಮಾರ್ ವರ್ಮಾ (50) ಎಂದು ಗುರುತಿಸಲಾಗಿದೆ. ಇನ್ನೂ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರೋಹಿತ್ ಕುಮಾರ್, ಜಗತ್ ಪಾಲ್ ಮತ್ತು ಅರ್ಚನಾ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋಗೆ ಕರೆದೊಯ್ಯಲಾಗಿದ್ದು, ಅಲ್ಲಿ ಚಿಕಿತ್ಸೆಯ ವೇಳೆ ರೋಹಿತ್ ಕುಮಾರ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಘಟನೆಯ ಕುರಿತು ಖೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆಯನ್ನು ನಡೆಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಇದನ್ನೂ ಓದಿ : Balochistan Bus accident: ಕಂದಕಕ್ಕೆ ಉರುಳಿದ‌ ಪ್ರಯಾಣಿಕರ ಬಸ್‌ : 39 ಸಾವು

ಇದನ್ನೂ ಓದಿ : Women give birth to child: ಎಮಿರೇಟ್ಸ್ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಮಗುವಿಗೆ ಜನ್ಮ ನೀಡಿದ ಮಹಿಳೆ

Truck accident-7 died: A truck ran over a group of people standing on the roadside: 7 people died

Comments are closed.