ಮಲ್ಪೆಯ ಲಕ್ಷ್ಮೀನಗರದಲ್ಲಿ ಯೋಗೀಶ್ ಸುವರ್ಣ ಬರ್ಬರ ಹತ್ಯೆ

0

ಉಡುಪಿ : ಯುವಕನೋರ್ವನನ್ನು ನಾಲ್ವರು ದುಷ್ಕರ್ಮಿಗಳ ತಂಡ ಹತ್ಯೆಗೈದು ಪರಾರಿಯಾಗಿರುವ ಘಟನ ನಡೆದಿದೆ. ಉಡುಪಿ ಜಿಲ್ಲೆಯ ಮಲ್ಪೆಯ ಲಕ್ಷ್ಮೀನಗರದ ಶಾಲೆಯ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮಲ್ಪೆಯ ಬಂದರಿನಲ್ಲಿ ಬೋಟ್ ಗಳಿಗೆ ಮಂಜುಗಡ್ಡೆ ಹಾಕುವ ವೃತ್ತಿಯನ್ನು ಮಾಡಿಕೊಂಡಿದ್ದ ಯೋಗೀಶ್ ಸುವರ್ಣ (29) ನಿನ್ನೆ ರಾತ್ರಿ ಎಂದಿನಂತೆ ಕೆಲಸ ಮುಗಿಸಿ ತನ್ನ ಮನೆಗೆ ಹಿಂದಿರುಗುತ್ತಿದ್ದ. ಈ ವೇಳೆಯಲ್ಲಿ ಬಂದ ನಾಲ್ವರ ತಂಡವು ತಲ್ವರಿನಿಂದ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದೆ.

ಸ್ವೌಮ್ಯ ಸ್ವಭಾವದವನಾಗಿರುವ ಯೋಗೀಶ್ ಸುವರ್ಣ ನನ್ನು ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎನ್ನುವುದು ಖಚಿತವಾಗಿಲ್ಲ. ಆದರೆ ಹಣಕಾಸಿನ ವಿಚಾರಕ್ಕೆ ಈ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ. ರೌಡಿಶೀಟರ್ ವಕ್ವಾಡಿ ಪ್ರವೀಣ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸುಜಿತ್ ಪಿಂಟೋ ಎಂಬಾತ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

ಸುಜಿತ್ ಪಿಂಟೋ ಹಾಗೂ ಆತನ ಅಣ್ಣ ಬಡ್ಡಿ ವ್ಯವಹಾರವನ್ನು ನಡೆಸುತ್ತಿದ್ದು, ಯೋಗೀಶ್ ಹಣವನ್ನು ಪಡೆದಿದ್ದ. ಇದೇ ವಿಚಾರಕ್ಕೆ ಈ ಹಿಂದೆಯೂ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮಲ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.