ನಿತ್ಯಭವಿಷ್ಯ 18-05-2020

0


ಮೇಷರಾಶಿ
ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ, ಮಿತ್ರರೇ ಶತ್ರುಗಳಾಗುವರು, ಸಾಮಾಜಿಕವಾಗಿ ಗುರು, ಧಾರ್ಮಿಕ ವರಿಷ್ಠರ ಭೇಟಿಗೆ ಅವಕಾಶವಿರುತ್ತದೆ. ಆರ್ಥಿಕವಾಗಿ ಸಮಸ್ಯೆಗಳ ಪರಿಹಾರಾರ್ಥ ಯಶಸ್ವಿ ಕಾರ್ಯ ತಂತ್ರಗಳ ಜೋಡಣೆ, ರೂಪಣೆ, ಸಫ‌ಲತೆಯನ್ನು ತಂದುಕೊಡಲಿದೆ. ವಾಹನ, ಯಂತ್ರೋಪಕರಣಗಳಿಂದ ಖರ್ಚು-ವೆಚ್ಚಗಳು ಅಧಿಕರೂಪದಲ್ಲಿ ತೋರಿ ಬಂದಾವು ಅಧಿಕವಾದ ಆಯಾಸ, ನರ ದೌರ್ಬಲ್ಯ, ಚರ್ಮ ತುರಿಕೆ, ತಲೆ ನೋವು.

ವೃಷಭರಾಶಿ
ಉನ್ನತ ವಿದ್ಯಾಭ್ಯಾಸಕ್ಕೆ ಮನಸ್ಸು, ಕುಟುಂಬ ಪರಿಸ್ಥಿತಿಯಿಂದ ಹಿನ್ನಡೆ, ಮನಸ್ಸಿನಲ್ಲಿ ಆತಂಕ,ಕುಟುಂಬ ವರ್ಗದವರ ಶುಭಕಾರ್ಯಕ್ಕೆ ಸಂಬಂಧಪಟ್ಟ ಚಟುವಟಿಕೆಗಳು ಸಂತಸ ತರಲಿದೆ. ಬಂಧು ಕುಟುಂಬಿಕರ ಮಿಲನದ ಅವಕಾಶದಿಂದ ಇಚ್ಛಿತ ಕೆಲಸ ಕಾರ್ಯಗಳು ನಡೆಯಲಿವೆ. ವಾಣಿಜ್ಯ, ವಿತ್ತಖಾತೆಗೆ ಸಂಬಂಧಪಟ್ಟ ಕಾರ್ಯ ಗಳಲ್ಲಿ ಪ್ರಗತಿ ತೋರಿಬರುತ್ತದೆ. ಹೂಡಿಕೆಗಳಲ್ಲಿ ಚೇತರಿಕೆ, ಉದ್ಯೋಗದಲ್ಲಿ ಇಚ್ಛಿತ ಬದಲಾವಣೆ ಸಂಭವನೀಯವಾದೀತು. ಸಂಸಾರದಲ್ಲಿ ಕಲಹ, ಆತ್ಮೀಯರೊಂದಿಗೆ ವೈಮನಸ್ಸು, ಉದ್ಯೋಗದಲ್ಲಿ ಒತ್ತಡ, ಕೆಲಸದಲ್ಲಿ ನಿರಾಸಕ್ತಿ.

ಮಿಥುನರಾಶಿ
ಶತ್ರುತ್ವ ಹೆಚ್ಚಾಗುವುದು, ವೃತ್ತಿರಂಗದಲ್ಲಿ ಇಚ್ಛಿತ ನಿರ್ಧಾರ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ಅಧಿಕಾರಿ ವರ್ಗದವರಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹ ಲಭಿಸಲಿದೆ. ಒಮ್ಮೊಮ್ಮೆ ಸಹೋದ್ಯೋಗಿಗಳ ವರ್ತನೆಯಿಂದ ಮಾನಸಿಕವಾಗಿ ಉದ್ವೇಗತರಲಿದೆ. ಸಮಾಧಾನದಿಂದ ಮುಂದು ವರಿಯಿರಿ. ಧನಾರ್ಜನೆಯಲ್ಲಿ ಪ್ರಗತಿ, ರೋಗ ಬಾಧೆ, ಅಧಿಕವಾದ ಉಷ್ಣ, ಮಾಟ-ಮಂತ್ರ ತಂತ್ರದ ಭೀತಿ, ಆತಂಕ ಸೃಷ್ಟಿಯಾಗುವುದು, ಈ ದಿನ ಅಶುಭ ಫಲ.

ಕಟಕರಾಶಿ
ಮಕ್ಕಳಿಂದ ಆಕಸ್ಮಿಕ ಧನ ನಷ್ಟ, ಆರೋಗ್ಯದಲ್ಲಿ ಏರುಪೇರು, ವಿದ್ಯಾಭ್ಯಾಸದಲ್ಲಿ ತೊಡಕು,ಹಣಕಾಸಿನ ವಿಚಾರಣೆಯಲ್ಲಿ ವಿವಾದಗಳು ಕಂಡು ಬರಲಿದೆ. ಹೊಂದಾಣಿಕೆಯ ಪ್ರಯತ್ನ ಅಗತ್ಯವಿದೆ. ವೃತ್ತಿರಂಗದಲ್ಲಿ ಅಧಿಕಾರಿ ವಲಯದಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹವು ಲಭಿಸಲಿದೆ. ವಿದ್ಯಾರ್ಥಿಗಳು ತಮ್ಮ ಉದಾಸೀನತೆಯನ್ನು ಬಿಟ್ಟು ಪ್ರಯತ್ನಬಲ ಮುಂದುವರಿಸಬೇಕು. ಮಹಿಳೆಯರಲ್ಲಿ ವೈಮನಸ್ಸು, ಬಂಧುಗಳೊಂದಿಗೆ ಮನಃಸ್ತಾಪ.

ಸಿಂಹರಾಶಿ
ಶುಭಕಾರ್ಯಗಳ ಚಿಂತನೆ ಕಾರ್ಯರೂಪಕ್ಕೆ ಬರಲಿದೆ. ಧನಾರ್ಜನೆಯಲ್ಲಿ ಪ್ರಗತಿ, ಭೂ ನಿವೇಶನ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಓಡಾಟ ತಂದೀತು. ಧಾರ್ಮಿಕ ಗುರುಗಳ ಭೇಟಿಯ ಅಪೂರ್ವ ಅವಕಾಶಗಳಿಂದ ಮಾನಸಿಕವಾಗಿ ನೆಮ್ಮದಿ ತಂದೀತು. ದೈವಾನುಗ್ರಹವು ಉತ್ತಮವಿದ್ದರೂ ಅನಾವಶ್ಯಕ ಮಾನಸಿಕ ಭ್ರಮೆಗಳು ಕಾಡಲಿವೆ. ದುಂದುವೆಚ್ಚಾದಿಗಳ ಮೇಲೆ ಹತೋಟಿ ಅಗತ್ಯವಿರುತ್ತದೆ. ಮಕ್ಕಳೊಂದಿಗೆ ಕಲಹ, ಮಿತ್ರರ ಜೊತೆ ವೈಮನಸ್ಸು, ಪೆಟ್ಟಾಗುವ ಸಾಧ್ಯತೆ, ಸೋಮಾರಿತನ, ಆತಂಕ, ವ್ಯವಹಾರದಲ್ಲಿ ಎಚ್ಚರ, ಆತುರ ಸ್ವಭಾವದಿಂದ ತೊಂದರೆ, ಅಕ್ರಮ ವಿಚಾರಗಳು ಬಯಲಾಗುವುದು.

ಕನ್ಯಾರಾಶಿ
ಮಕ್ಕಳ ವಿದ್ಯಾಭ್ಯಾಸಕ್ಕೆ ದೂರ ಪ್ರಯಾಣ, ಮನಸ್ಸಿನಲ್ಲಿ ಆತಂಕ, ಉದ್ಯೋಗ ಸ್ಥಳದಲ್ಲಿ ಶತ್ರುಕಾಟ, ಆರ್ಥಿಕ ವಿಚಾರದಲ್ಲಿ ಆಶಾದಾಯಕ ಬೆಳವಣಿಗೆಯೊಂದರ ಅನುಭವವು ಆಗಲಿದೆ. ಉದ್ಯೋಗ ರಂಗದಲ್ಲಿ ಮೇಲಾಧಿಕಾರಿಗಳ ಬಿಗು ವಾತಾವರಣವು ಅಸಮಾಧಾನಕ್ಕೆ ಕಾರಣವಾದೀತು. ಕೌಟುಂಬಿಕ ವಾದ-ವಿವಾದ, ಕಲಹಗಳು ಹಂತ ಹಂತವಾಗಿ ಉಪಶಮನವಾಗಲಿವೆ. ಹಿತ ಶತ್ರುಗಳಿಂದ ವಿರೋಧಿಗಳಿಗೆ ಆಮಿಷ, ಪ್ರಲೋಭನೆಯಿಂದ ರಾಜಕೀಯ ವರ್ಗದವರಿಗೆ ಆತಂಕ ತಂದೀತು. ಸ್ವಯಂಕೃತ ಅಪರಾಧಗಳಿಂದ ನಷ್ಟ, ಅನಗತ್ಯ ಕಲಹ.

ತುಲಾರಾಶಿ
ಮಕ್ಕಳ ವಿಚಾರವಾಗಿ ಚಿಂತೆ, ಕುಟುಂಬದಲ್ಲಿ ವಾಗ್ವಾದ,
ತುಸು ನಿಧಾನಗತಿಯಲ್ಲಿ ಸಾಗಲಿರುವ ಕಾರ್ಯ ಯೋಜನೆಯು ಕಿರಿಕಿರಿಯೆನಿಸಿದರೂ ಸಮಾಧಾನ ತರಲಿದೆ. ಸ್ಥಗಿತ ಯೋಜನೆಯೊಂದರ ಅನುಷ್ಠಾನಾರ್ಥ ಕಾರ್ಯಚಟುವಟಿಕೆ ಸಫ‌ಲವಾಗಲಿದೆ. ಗೃಹದಲ್ಲಿ ತುಸು ನೆಮ್ಮದಿ, ಶ್ರೇಯಸ್ಸು ಉಂಟಾಗುವುದು. ಕಾರ್ಯಾಂತರದಿಂದ ಮನೆಯಿಂದ ದೂರ ಉಳಿಯಬೇಕಾದ ಪರಿಸ್ಥಿತಿ ತೋರಿ ಬಂದರೂ ನಿರೀಕ್ಷಿತ ಫ‌ಲ ಲಭಿಸಲಿದೆ.  ಹಣಕಾಸು ವಿಚಾರದಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಕಲಹ, ಸ್ನೇಹಿತರೊಂದಿಗೆ ದೂರ ಪ್ರಯಾಣ.

ವೃಶ್ಚಿಕರಾಶಿ
ಕೆಲಸ ಕಾರ್ಯಗಳಲ್ಲಿ ವಿಘ್ನ, ವ್ಯಾಪಾರ ವ್ಯವಹಾರಕ್ಕೆ ಅಡೆತಡೆ, ಮಕ್ಕಳಲ್ಲಿ ಒತ್ತಡ, ಧನಾರ್ಜನೆಯ ವಿಪುಲ ಅವಕಾಶಗಳು ಸದ್ಯದಲ್ಲೇ ತೋರಿ ಬರಲಿವೆ. ಪೂರ್ವನಿಯೋಜಿತ ಕೆಲಸಕಾರ್ಯಗಳ ಮುನ್ನಡೆಗಾಗಿ ನಡೆಸುವ ಪ್ರಯತ್ನಗಳು ಫ‌ಲ ನೀಡಲಿವೆ. ಬಂಧುಮಿತ್ರರ ಸಹಕಾರ ಇಚ್ಛಿತ ಕಾರ್ಯಗಳಿಗೆ ಅನುಕೂಲವಾದೀತು. ಸಾಮಾಜಿಕ ಕೆಲಸಕಾರ್ಯಗಳಿಗಾಗಿ ಒತ್ತಡ ತೋರಿಬರಲಿದೆ. ಮರೆವಿನ ಸಮಸ್ಯೆ, ಮಿತ್ರರಿಂದ ಅನುಕೂಲ, ಸ್ಥಿರಾಸ್ತಿ ಯೋಗ.

ಧನಸ್ಸುರಾಶಿ
ಒತ್ತಡದ ನಡುವೆಯೂ ಕಾರ್ಯನಿರ್ವಹಣೆಯಲ್ಲಿ ಸಫ‌ಲತೆ ಇರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ವಿರೋಧಿಗಳಲ್ಲಿ ಹೊಂದಾಣಿಕೆ ಮಾಡಿಕೊಂಡಲ್ಲಿ ಉತ್ತಮ. ಆರ್ಥಿಕವಾಗಿ ಸಾಲ ಮರುಪಾವತಿಯ ಬಗ್ಗೆ ಒತ್ತಡ ತಂದೀತು. ಸಾಂಸಾರಿಕವಾಗಿ ವಿಶ್ರಾಂತಿಯು ಸುಖಾಪೇಕ್ಷೆಯಾದೀತು. ವ್ಯಾಪಾರ, ವ್ಯವಹಾರಗಳಲ್ಲಿ ಸ್ನೇಹಿತರ ಸಹಾಯಹಸ್ತ ನಿಮಗೆ ನೆರವಾಗಲಿದೆ. ಭೂ, ನಿವೇಶನ, ಗೃಹ ನಿರ್ಮಾಣ ಕಾರ್ಯಗಳು, ನೂತನ ವ್ಯಾಪಾರ, ವ್ಯವಹಾರಗಳಿಗೆ ಇದು ಸಕಾಲವಲ್ಲ, ಮಕ್ಕಳಲ್ಲಿ ಚಟುವಟಿಕೆ ಕಡಿಮೆ, ಬಂಧುಗಳಿಂದ ಅವಮಾನ, ಆತ್ಮ ಗೌರವಕ್ಕೆ ಚ್ಯುತಿ, ಇಲ್ಲ ಸಲ್ಲದ ಅಪವಾದ, ಆತ್ಮೀಯ ಮಿತ್ರರು ದೂರವಾಗುವರು.

ಮಕರರಾಶಿ
ಆರೋಗ್ಯದಲ್ಲಿ ಸಮಸ್ಯೆ, ಬುದ್ಧಿ ಮಂದತ್ವ, ಅಪೂರ್ವ ಅವಕಾಶವೊಂದು ಎದುರಾಗಲಿರುವ ಸೂಚನೆ ತಂದುಕೊಡಲಿದೆ. ವಿಶಿಷ್ಟ ಕಾರ್ಯವೈಖರಿಯಿಂದ ಆರ್ಥಿಕ ಬಿಕ್ಕಟ್ಟಿ ನಿಂದ ಪಾರಾಗಲಿದ್ದೀರಿ. ಸಾಂಸಾರಿಕ ಸಮಸ್ಯೆಯೊಂದರ ಮೇಲೆ ಹತೋಟಿ ಸಾಧಿಸುವ ಅವಕಾಶ ತಂದೀತು. ಅವಿವಾಹಿತರ ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಯೋಗವು ಒದಗಿಬರಲಿದೆ. ಸಾಮಾಜಿಕ ಸೇವಾಕಾರ್ಯಗಳಲ್ಲಿ ನಿಮ್ಮ ಕಾರ್ಯ ಸಾಧನೆ ಗುರುತಿಸಲ್ಪಡುತ್ತದೆ. ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮಿತ್ರರೊಂದಿಗೆ ಕಲಹ, ಕಂಕಣ ಭಾಗ್ಯ ಒಲಿಯುವುದು.

ಕುಂಭರಾಶಿ
ಮಾಟ-ಮಂತ್ರ ತಂತ್ರದ ಭೀತಿ, ಆರೋಗ್ಯದಲ್ಲಿ ಏರುಪೇರು, ವೃತ್ತಿರಂಗದಲ್ಲಿ ಇತರರೊಂದಿಗೆ ಹೊಂದಾಣಿಕೆ ಅಗತ್ಯವೆನಿಸಲಿದೆ. ಅವಿವಾಹಿತರ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಒದಗಿಬರಲಿದೆ. ದೇಹಾ ರೋಗ್ಯದಲ್ಲಿ ಕೂಡಾ ಸುಧಾರಣೆ ಸಮಾಧಾನ ತರಲಿದೆ. ನಿರೀಕ್ಷೆಯಲ್ಲಿದ್ದ ಅವಕಾಶವೊಂದು ಕೈಗೆ ಬರಲಿದೆ. ಸದುಪಯೋಗಿಸಿ ಕೊಳ್ಳಿರಿ. ಧನಾರ್ಜನೆಯಲ್ಲಿ ವಿವಿಧ ರೀತಿಯ ಸಂಗ್ರಹಯತ್ನದಲ್ಲಿ ಸಫ‌ಲತೆ ತಂದೀತು. ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ, ಹಣಕಾಸು ವಿಚಾರವಾಗಿ ಮೋಸ, ಈ ದಿನ ಅಶುಭ ಫಲ.

ಮೀನರಾಶಿ
ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್ ವಾಸ್ತವ್ಯ, ಶುಭಮಂಗಲ ಕಾರ್ಯಗಳಿಗಾಗಿ ಪ್ರಯಾಣ ಅನಿವಾರ್ಯ ವಾದೀತು. ವೃತ್ತಿರಂಗದಲ್ಲಿ ಚಿಂತನೆ ಹಾಗೂ ಕಾರ್ಯಗಳಲ್ಲಿ ವಿರೋಧಾಭಾಸ ಕಂಡು ಬಂದೀತು. ಆರ್ಥಿಕ ವಿಚಾರಗಳಿಗೆ ಸಂಬಂಧಪಟ್ಟ ಕಾರ್ಯದಲ್ಲಿ ಪ್ರಗತಿ ಇದೆ. ವ್ಯಾಪಾರಿ ವರ್ಗದವರಿಗೆ ಹಳೆಯ ವಸ್ತು, ಸರಕುಗಳ ವಿಕ್ರಯದ ಅವಕಾಶದಿಂದ ಹೆಚ್ಚಿನ ಲಾಭದಾಯಕ ಆದಾಯವಿರುತ್ತದೆ. ಆರೋಗ್ಯದ ವಿಚಾರದಲ್ಲಿ ಕಾಳಜಿ ಅಗತ್ಯ, ದಾಂಪತ್ಯದಲ್ಲಿ ಮನಃಸ್ತಾಪ, ಸ್ಥಿರಾಸ್ತಿ ನಷ್ಟ, ವಾಹನ ರಿಪೇರಿ, ನಷ್ಟ-ಸಂಕಷ್ಟಗಳ ಆತಂಕ.

Leave A Reply

Your email address will not be published.