ನಿತ್ಯಭವಿಷ್ಯ : (19-03-2021 ರ ಶುಕ್ರವಾರ) ಈ ರಾಶಿಯವರು ಅಪಮಾನ, ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ

ಮೇಷರಾಶಿ
ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು.
ಅದೃಷ್ಟ ಸಂಖ್ಯೆ : 4

ವೃಷಭರಾಶಿ
ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸ ಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ.
ಅದೃಷ್ಟ ಸಂಖ್ಯೆ : 9

ಮಿಥುನರಾಶಿ
ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಅದೃಷ್ಟ ಸಂಖ್ಯೆ : 2

ಕರ್ಕರಾಶಿ
ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ ಆಗುವ ಯೋಗವಿದೆ.
ಅದೃಷ್ಟ ಸಂಖ್ಯೆ :  7

ಸಿಂಹರಾಶಿ
ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.
ಅದೃಷ್ಟ ಸಂಖ್ಯೆ : 5

ಕನ್ಯಾರಾಶಿ
ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಅದೃಷ್ಟ ಸಂಖ್ಯೆ : 8

ತುಲಾರಾಶಿ
ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ.
ಅದೃಷ್ಟ ಸಂಖ್ಯೆ : 3

ವೃಶ್ಚಿಕರಾಶಿ
ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ.
ಅದೃಷ್ಟ ಸಂಖ್ಯೆ : 4

ಧನುರಾಶಿ
ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು.
ಅದೃಷ್ಟ ಸಂಖ್ಯೆ : 6

ಮಕರರಾಶಿ
ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರ ಪ್ರಯಾಣ ಯೋಗವಿದೆ.
ಅದೃಷ್ಟ ಸಂಖ್ಯೆ : 9

ಕುಂಭರಾಶಿ
ಅಪಮಾನ, ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು.
ಅದೃಷ್ಟ ಸಂಖ್ಯೆ : 1

ಮೀನರಾಶಿ
ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋ ಸೇವೆಯಿಂದ ಕಷ್ಟಪರಿಹಾರ.
ಅದೃಷ್ಟ ಸಂಖ್ಯೆ : 5

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.