ಸೋಮವಾರ, ಜೂನ್ 16, 2025
Homehoroscopeನಿತ್ಯಭವಿಷ್ಯ : (21-03-2021 ಭಾನುವಾರ ) ಈ ರಾಶಿಯವರಿಗೆ ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು

ನಿತ್ಯಭವಿಷ್ಯ : (21-03-2021 ಭಾನುವಾರ ) ಈ ರಾಶಿಯವರಿಗೆ ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು

- Advertisement -

ಮೇಷರಾಶಿ
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆ ವಹಿಸಿರಿ.
ಅದೃಷ್ಟ ಸಂಖ್ಯೆ : 9

ವೃಷಭರಾಶಿ
ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ
ಅದೃಷ್ಟ ಸಂಖ್ಯೆ :4

ಮಿಥುನರಾಶಿ
ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ.
ಅದೃಷ್ಟ ಸಂಖ್ಯೆ :3

ಕರ್ಕಾಟಕರಾಶಿ
ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವುದು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು.
ಅದೃಷ್ಟ ಸಂಖ್ಯೆ :7

ಸಿಂಹರಾಶಿ
ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ.
ಅದೃಷ್ಟ ಸಂಖ್ಯೆ :5

ಕನ್ಯಾರಾಶಿ
ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು.
ಅದೃಷ್ಟ ಸಂಖ್ಯೆ :8

ತುಲಾರಾಶಿ
ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.
ಅದೃಷ್ಟ ಸಂಖ್ಯೆ :1

ವೃಶ್ಚಿಕರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ.
ಅದೃಷ್ಟ ಸಂಖ್ಯೆ :9

ಧನುರಾಶಿ
ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವುದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು.
ಅದೃಷ್ಟ ಸಂಖ್ಯೆ :7

ಮಕರರಾಶಿ
ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣ ಹೂಡಿಕೆ ಈಗ ಬೇಡ.
ಅದೃಷ್ಟ ಸಂಖ್ಯೆ :4

https://kannada.newsnext.live/schools-in-tamil-nadu-to-be-shut-from-march-22-due-to-rise-in-covid-19-cases/

ಕುಂಭರಾಶಿ
ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು.
ಅದೃಷ್ಟ ಸಂಖ್ಯೆ :8

ಮೀನರಾಶಿ
ವ್ಯಯಕ್ತಿಕ ಧನಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ಆಗುವವು. ಉದ್ಯೋಗದಲ್ಲಿ ಉನ್ನತಿ ಇರುವದು. ವ್ಯಾಪಾರದಲ್ಲಿ ಹಣಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು.
ಅದೃಷ್ಟ ಸಂಖ್ಯೆ :5

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular