ನಿತ್ಯಭವಿಷ್ಯ : ಹೇಗಿದೆ ಇಂದಿನ ನಿಮ್ಮ ಜಾತಕಫಲ

ಮೇಷರಾಶಿ
ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗತಿಗಳು ಅನುಕೂಲಕರವಾಗಿ ಮುಂದವರಿ ಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
ಅದೃಷ್ಟರಾಶಿ : 5

ವೃಷಭರಾಶಿ
ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
ಅದೃಷ್ಟರಾಶಿ : 7

ಮಿಥುನರಾಶಿ
ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು.
ಅದೃಷ್ಟರಾಶಿ : 1

ಕರ್ಕಾಟಕರಾಶಿ
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು.
ಅದೃಷ್ಟರಾಶಿ : 8

ಸಿಂಹರಾಶಿ
ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.
ಅದೃಷ್ಟರಾಶಿ : 4

ಕನ್ಯಾರಾಶಿ
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆ ವಹಿಸಿರಿ.
ಅದೃಷ್ಟರಾಶಿ : 5

ತುಲಾರಾಶಿ
ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
ಅದೃಷ್ಟರಾಶಿ : 2

ವೃಶ್ಚಿಕರಾಶಿ
ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.
ಅದೃಷ್ಟರಾಶಿ : 6

ಧನುರಾಶಿ
ಅನಿರೀಕ್ಷಿತ ಸಂಚಾರ ಒದಗಿ ಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು.
ಅದೃಷ್ಟರಾಶಿ :3

ಮಕರರಾಶಿ
ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆ ನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.
ಅದೃಷ್ಟರಾಶಿ : 6

ಕುಂಭರಾಶಿ
ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು.
ಅದೃಷ್ಟರಾಶಿ : 8

ಮೀನರಾಶಿ
ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು.
ಅದೃಷ್ಟರಾಶಿ : 3

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.