ನಿತ್ಯಭವಿಷ್ಯ : 06-07-2020

0

ಮೇಷರಾಶಿ
ಆರ್ಥಿಕವಾಗಿ ಸಮಸ್ಯೆಗಳ ಪರಿಹಾರಾರ್ಥ ಯಶಸ್ವಿ ಕಾರ್ಯ ತಂತ್ರಗಳ ಜೋಡಣೆ, ರೂಪಣೆ, ಸಫ‌ಲತೆಯನ್ನು ತಂದುಕೊಡಲಿದೆ. ವೃತ್ತಿರಂಗದಲ್ಲಿ ಯಶಸ್ಸು. ಹೂಡಿಕೆಗಳಲ್ಲಿ ತುಸು ಚೇತರಿಕೆ ತಂದರೂ ಕಾದುನೋಡುವ ನೀತಿ ಉತ್ತಮ. ಭೂ ಲಾಭ, ಮಾನಸಿಕ ನೆಮ್ಮದಿ, ಸಾಂಸಾರಿಕವಾಗಿ ಹೊಂದಾಣಿಕೆ ಮುಖ್ಯ.

ವೃಷಭರಾಶಿ
ವಾಹನ, ಭೂಖರೀದಿ, ಮನೆನಿರ್ಮಾಣ ಕಾರ್ಯ ಹಾಗೂ ಶುಭಮಂಗಲ ಕಾರ್ಯಗಳಿವೆ. ಇಚ್ಛಿತ ಕೆಲಸ ಕಾರ್ಯಗಳು ನಡೆಯಲಿವೆ. ಕುಟುಂಬ ವರ್ಗದವರ ಶುಭಕಾರ್ಯಕ್ಕೆ ಸಂಬಂಧಪಟ್ಟ ಚಟುವಟಿಕೆಗಳು ಸಂತಸ ತರಲಿದೆ. ಕೀಳರಿಮೆ, ದೌರ್ಬಲ್ಯಗಳಿಂದ ಚೇತರಿಸಿ ಕೊಳ್ಳುವ ಸೂಚನೆ ಕಂಡುಬಂದೀತು. ವಾಣಿಜ್ಯ, ವಿತ್ತಖಾತೆಗೆ ಸಂಬಂಧಪಟ್ಟ ಕಾರ್ಯಗಳಲ್ಲಿ ಪ್ರಗತಿ, ಹೂಡಿಕೆಗಳಲ್ಲಿ ಚೇತರಿಕೆ, ಉದ್ಯೋಗದಲ್ಲಿ ಇಚ್ಛಿತ ಬದಲಾವಣೆ ಸಂಭವನೀಯವಾದೀತು.

ಮಿಥುನರಾಶಿ
ಧನಾರ್ಜನೆಯಲ್ಲಿ ಪ್ರಗತಿ ಇದ್ದರೂ ಖರ್ಚುವೆಚ್ಚಗಳು ಹೆಚ್ಚಲಿದೆ. ಕಾರ್ಯಕ್ಷೇತ್ರದಲ್ಲಿ ಕಾರ್ಯಾಂತರದಿಂದ ಮನೆಯಿಂದ ದೂರ ಉಳಿಯ ಬೇಕಾದ ಪರಿಸ್ಥಿತಿಯು ತೋರಿ ಬರುತ್ತದೆ. ವೃತ್ತಿರಂಗದಲ್ಲಿ ಇಚ್ಛಿತ ನಿರ್ಧಾರ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ಅಧಿಕಾರಿ ವರ್ಗದವರಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹ ಲಭಿಸಲಿದೆ. ಒಮ್ಮೊಮ್ಮೆ ಸಹೋದ್ಯೋಗಿಗಳ ವರ್ತನೆಯಿಂದ ಮಾನಸಿಕವಾಗಿ ಉದ್ವೇಗತರಲಿದೆ. ಸಮಾಧಾನದಿಂದ ಮುಂದು ವರಿಯಿರಿ.

ಕಟಕರಾಶಿ
ವೃತ್ತಿರಂಗದಲ್ಲಿ ಅಧಿಕಾರಿ ವಲಯದಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹವು ಲಭಿಸಲಿದೆ. ಹಣಕಾಸಿನ ವಿಚಾರಣೆಯಲ್ಲಿ ವಿವಾದಗಳು ಕಂಡು ಬರಲಿದೆ. ಅನ್ಯ ಕಾರ್ಯಗಳ ಒತ್ತಡದಿಂದ ಮಾನಸಿಕ ಅಶಾಂತಿಗೆ ಕಾರಣವಾದೀತು. ಸ್ನೇಹಿತರಲ್ಲಿ ಕಲಹ, ಮನಸ್ತಾಪದ ಪ್ರಸಂಗ ತೋರಿ ಬಂದೀತು. ಆರೋಗ್ಯ ಭಯ ನಿವಾರಣೆಯಾಗಲಿದೆ. ವಿದ್ಯಾರ್ಥಿಗಳು ತಮ್ಮ ಉದಾಸೀನತೆಯನ್ನು ಬಿಟ್ಟು ಪ್ರಯತ್ನಬಲ ಮುಂದುವರಿಸಬೇಕು. ಹೊಂದಾಣಿಕೆಯ ಪ್ರಯತ್ನ ಅಗತ್ಯವಿದೆ.

ಸಿಂಹರಾಶಿ
ಧನಾರ್ಜನೆಯಲ್ಲಿ ಪ್ರಗತಿ, ಭೂ ನಿವೇಶನ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಓಡಾಟ ತಂದೀತು. ದೈವಾನುಗ್ರಹವು ಉತ್ತಮವಿದ್ದರೂ ಅನಾವಶ್ಯಕ ಮಾನಸಿಕ ಭ್ರಮೆಗಳು ಕಾಡಲಿವೆ. ಶುಭಕಾರ್ಯಗಳ ಚಿಂತನೆ ಕಾರ್ಯರೂಪಕ್ಕೆ ಬರಲಿದೆ. ಧಾರ್ಮಿಕ ಗುರುಗಳ ಭೇಟಿಯ ಅಪೂರ್ವ ಅವಕಾಶಗಳಿಂದ ಮಾನಸಿಕವಾಗಿ ನೆಮ್ಮದಿ ತಂದೀತು. ದುಂದುವೆಚ್ಚಾದಿಗಳ ಮೇಲೆ ಹತೋಟಿ ಅಗತ್ಯವಿರುತ್ತದೆ. ವಿದ್ಯಾರ್ಥಿಗಳಿಗೆ ಸಹವಾಸದೋಷದಿಂದ ಅನಗತ್ಯವಾದ ಅಪವಾದ.

ಕನ್ಯಾರಾಶಿ
ಉದ್ಯೋಗ ರಂಗದಲ್ಲಿ ಮೇಲಾಧಿಕಾರಿಗಳ ಬಿಗು ವಾತಾವರಣವು ಅಸಮಾಧಾನಕ್ಕೆ ಕಾರಣವಾದೀತು. ಕೌಟುಂಬಿಕ ವಾದ-ವಿವಾದ, ಕಲಹಗಳು ಹಂತ ಹಂತವಾಗಿ ಉಪಶಮನವಾಗಲಿವೆ. ಆರ್ಥಿಕ ವಿಚಾರದಲ್ಲಿ ಆಶಾದಾಯಕ ಬೆಳವಣಿಗೆಯೊಂದರ ಅನುಭವವು ಆಗಲಿದೆ. ಹಿತ ಶತ್ರುಗಳಿಂದ ವಿರೋಧಿಗಳಿಗೆ ಆಮಿಷ, ರಾಜಕೀಯ ವರ್ಗದವರಿಗೆ ಆತಂಕ ತಂದೀತು.

ತುಲಾರಾಶಿ
ಕಾರ್ಯ ಕ್ಷೇತ್ರದಲ್ಲಿ ಮನೋದೃಢತೆ, ದಿಟ್ಟತನದ ಪ್ರವೃತ್ತಿಯಿಂದ ಪ್ರಗತಿಯ ಮುನ್ನಡೆಯನ್ನು ಸಾಧಿಸಲಿದ್ದೀರಿ. ಗುರಿಯತ್ತ ನಡೆಯಲು ದೃಢ ಮನಸ್ಸು ಮಾಡಿರಿ. ತುಸು ನಿಧಾನಗತಿಯಲ್ಲಿ ಸಾಗಲಿರುವ ಕಾರ್ಯ ಯೋಜನೆಯು ಕಿರಿಕಿರಿಯೆನಿಸಿದರೂ ಸಮಾಧಾನ ತರಲಿದೆ. ಸ್ಥಗಿತ ಯೋಜನೆಯೊಂದರ ಅನುಷ್ಠಾನ ಸಫ‌ಲವಾಗಲಿದೆ. ಗೃಹದಲ್ಲಿ ತುಸು ನೆಮ್ಮದಿ, ಶ್ರೇಯಸ್ಸು ಉಂಟಾಗುವುದು.

ವೃಶ್ಚಿಕರಾಶಿ
ಸಾಮಾಜಿಕ ಕೆಲಸಕಾರ್ಯಗಳಿಗಾಗಿ ಒತ್ತಡ ತೋರಿಬರಲಿದೆ. ತುಸು ಕಲಹ ಪ್ರಸಂಗ ಎದುರಾದರೂ ವೃತ್ತಿರಂಗದಲ್ಲಿ ಕೆಲಸ ಕಾರ್ಯಗಳು ಸರಾಗವಾಗಿ ನಡೆದುಹೋಗಲಿವೆ. ಧನಾರ್ಜನೆಯ ವಿಪುಲ ಅವಕಾಶಗಳು ಸದ್ಯದಲ್ಲೇ ತೋರಿ ಬರಲಿವೆ. ನಿಯೋಜಿತ ಕೆಲಸಕಾರ್ಯಗಳ ಮುನ್ನಡೆಗಾಗಿ ನಡೆಸುವ ಪ್ರಯತ್ನಗಳು ಫ‌ಲ ನೀಡಲಿವೆ. ಬಂಧುಮಿತ್ರರ ಸಹಕಾರ ಇಚ್ಛಿತ ಕಾರ್ಯಗಳಿಗೆ ಅನುಕೂಲವಾದೀತು.

ಧನುರಾಶಿ
ಭೂ, ನಿವೇಶನ, ಗೃಹ ನಿರ್ಮಾಣ ಕಾರ್ಯಗಳು, ನೂತನ ವ್ಯಾಪಾರ, ವ್ಯವಹಾರಗಳಿಗೆ ಇದು ಸಕಾಲವಲ್ಲ. ಕಠಿಣ ಪರಿಶ್ರಮ ಹಾಗೂ ಸತತ ಶ್ರಮದಿಂದ ಕಾರ್ಯಸಾಧನೆ ಆದೀತು. ಒತ್ತಡದ ನಡುವೆಯೂ ಕಾರ್ಯನಿರ್ವಹಣೆಯಲ್ಲಿ ಸಫ‌ಲತೆ ಇರುತ್ತದೆ. ಆರ್ಥಿಕವಾಗಿ ಸಾಲ ಮರುಪಾವತಿಯ ಬಗ್ಗೆ ಒತ್ತಡ ತಂದೀತು. ಸಾಂಸಾರಿಕವಾಗಿ ವಿಶ್ರಾಂತಿಯು ಸುಖಾಪೇಕ್ಷೆಯಾದೀತು. ವ್ಯಾಪಾರ, ವ್ಯವಹಾರಗಳಲ್ಲಿ ಸ್ನೇಹಿತರ ಸಹಾಯಹಸ್ತ ನಿಮಗೆ ನೆರವಾಗಲಿದೆ.

ಮಕರರಾಶಿ
ಸಾಂಸಾರಿಕ ಸಮಸ್ಯೆಯೊಂದರ ಮೇಲೆ ಹತೋಟಿ ಸಾಧಿಸುವ ಅವಕಾಶ ತಂದೀತು. ಅವಿವಾಹಿತರ ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಯೋಗವು ಒದಗಿಬರಲಿದೆ. ಅಪೂರ್ವ ಅವಕಾಶವೊಂದು ಎದುರಾಗಲಿರುವ ಸೂಚನೆ ತಂದುಕೊಡಲಿದೆ. ವಿಶಿಷ್ಟ ಕಾರ್ಯವೈಖರಿಯಿಂದ ಆರ್ಥಿಕ ಬಿಕ್ಕಟ್ಟಿ ನಿಂದ ಪಾರಾಗಲಿದ್ದೀರಿ. ಸಾಮಾಜಿಕ ಸೇವಾಕಾರ್ಯಗಳಲ್ಲಿ ನಿಮ್ಮ ಕಾರ್ಯ ಸಾಧನೆ ಗುರುತಿಸಲ್ಪಡುತ್ತದೆ. ಧಾರ್ಮಿಕ ಕಾರ್ಯಾಸಕ್ತಿ ತೋರಿ ಬಂದು ಮಾನಸಿಕ ಶಾಂತಿ, ಸಮಾಧಾನ.

ಕುಂಭರಾಶಿ
ಉದ್ದೇಶಿತ ಕಾರ್ಯದಲ್ಲಿ ಸಿದ್ಧಿ. ಗೃಹ, ಭೂ, ವಾಹನಾದಿಗಳಿಗಾಗಿ ಧನವ್ಯಯ ವಾಗಲಿದೆ. ದೇಹಾರೋಗ್ಯದಲ್ಲಿ ಕೂಡಾ ಸುಧಾರಣೆ ಸಮಾಧಾನ ತರಲಿದೆ. ನಿರೀಕ್ಷೆಯಲ್ಲಿದ್ದ ಅವಕಾಶವೊಂದು ಕೈಗೆ ಬರಲಿದೆ. ಸದುಪಯೋಗಿಸಿ ಕೊಳ್ಳಿರಿ. ವೃತ್ತಿರಂಗದಲ್ಲಿ ಇತರರೊಂದಿಗೆ ಹೊಂದಾಣಿಕೆ ಅಗತ್ಯವೆನಿಸಲಿದೆ. ಶತ್ರುಭಯ ನಿವಾರಣೆ, ಆರೋಗ್ಯದಲ್ಲಿ ಏರುಪೇರು ಕಂಡುಬರಲಿದೆ.ಅವಿವಾಹಿತರ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಒದಗಿಬರಲಿದೆ.

ಮೀನರಾಶಿ
ಪ್ರತಿಷ್ಠೆ, ಗೌರವದ ಕಾರಣವಾಗಿ ಕೆಲವೊಂದು ಖರ್ಚು-ವೆಚ್ಚಗಳು ಅನಿವಾರ್ಯವಾಗಿ ಬಂದಾವು. ಶುಭಮಂಗಲ ಕಾರ್ಯಗಳಿಗಾಗಿ ಪ್ರಯಾಣ ಅನಿವಾರ್ಯ ವಾದೀತು. ವೃತ್ತಿರಂಗದಲ್ಲಿ ಚಿಂತನೆ ಹಾಗೂ ಕಾರ್ಯಗಳಲ್ಲಿ ವಿರೋಧಾಭಾಸ ಕಂಡು ಬಂದೀತು. ಆರ್ಥಿಕ ವಿಚಾರಗಳಿಗೆ ಸಂಬಂಧಪಟ್ಟ ಕಾರ್ಯದಲ್ಲಿ ಪ್ರಗತಿ ಇದೆ. ವ್ಯಾಪಾರಿ ವರ್ಗದವರಿಗೆ ಹಳೆಯ ವಸ್ತು, ಸರಕುಗಳ ವಿಕ್ರಯದ ಅವಕಾಶದಿಂದ ಹೆಚ್ಚಿನ ಲಾಭದಾಯಕ ಆದಾಯವಿರುತ್ತದೆ. ಆರೋಗ್ಯದ ವಿಚಾರದಲ್ಲಿ ಕಾಳಜಿ ಅಗತ್ಯ.

Leave A Reply

Your email address will not be published.