Assault case in Bhadravati:ಭದ್ರಾವತಿ ಹಲ್ಲೆ ಪ್ರಕರಣ : ಆರೋಪಿ ಬಂಧನ; ಗೃಹ ಸಚಿವರಿಂದ ಶಿವಮೊಗ್ಗದಲ್ಲಿ ಹೈಲೆವೆಲ್ ಮೀಟಿಂಗ್
ಶಿವಮೊಗ್ಗ : Assault case in Bhadravati: ಶಿವಮೊಗ್ಗದ ಭದ್ರಾವತಿಯಲ್ಲಿ ಭಜರಂಗದಳದ ಸದಸ್ಯ ಸುನೀಲ್ ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಭದ್ರಾವತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಬಾರಕ್ ಅಲಿಯಾಸ್ ಡಿಚ್ಚಿ ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ಭದ್ರಾವತಿಯ ನೆಹರೂ ನಗರದಲ್ಲಿ ಸುನೀಲ್ ಎಂಬಾತನ ಮೇಲೆ ಮುಬಾರಕ್ ಹಲ್ಲೆ ನಡೆಸಿದ್ದ. ಈ ಘಟನೆ ನಡೆದು ಕೆಲವೇ ಸಮಯದಲ್ಲಿ ಪೊಲೀಸರು ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಹಿಂಸಾಚಾರದ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ಜೊತೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ ನಡೆಸುತ್ತಿದ್ದಾರೆ.
ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಈ ಮೀಟಿಂಗ್ ನಡೆಯುತ್ತಿದ್ದು ಚಾಕು ಇರಿತ ಪ್ರಕರಣ ಸಂಬಂಧ ಗೃಹ ಸಚಿವರು ಪೊಲೀಸ್ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ . ಜೊತೆಯಲ್ಲಿ ಭದ್ರಾವತಿಯಲ್ಲಿ ಮಾರಕ ದಾಳಿಗೆ ಒಳಗಾಗಿರುವ ಹಿಂದೂ ಕಾರ್ಯಕರ್ತ ಸುನೀಲ್ ಕುಮಾರ್ ಪ್ರಕರಣದ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ. ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳ ಜೊತೆಯಲ್ಲಿ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಈ ಸಭೆಗೂ ಮುನ್ನ ಎಡಿಜಿಪಿ ಅಲೋಕ್ ಕುಮಾರ್ ಭದ್ರಾವತಿಯಲ್ಲಿ ಸಿಟಿ ರೌಂಡ್ಸ್ ಹಾಕಿದರು. ಭದ್ರಾವತಿ ನಗರದಲ್ಲಿ ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಭದ್ರತಾ ಪರಿಶೀಲನೆಯನ್ನು ಮಾಡಿದ್ದಾರೆ. ಸುನೀಲ್ ಕುಮಾರ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಬೆಳಕಿಗೆ ಬರ್ತಿದ್ದಂತೆಯೇ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ತ್ಯಾಗರಾಜನ್ ಹಾಗೂ ಎಸ್ಪಿ ಲಕ್ಷ್ಮೀ ಪ್ರಸಾದ್ ಭದ್ರಾವತಿಯಲ್ಲಿ ಖುದ್ದು ಫೀಲ್ಡಿಗಿಳಿದು ತಪಾಸಣೆ ನಡೆಸಿದ್ದಾರೆ.
ಇದನ್ನು ಓದಿ : Deadly attack on Hindu youth : ಶಿವಮೊಗ್ಗ ಚಾಕು ಇರಿತ ಪ್ರಕರಣ ಬೆನ್ನಲ್ಲೇ ಭದ್ರಾವತಿಯಲ್ಲಿ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಇದನ್ನೂ ಓದಿ : BCCI former Secretary Amitabh Chaudhary : ಬಿಸಿಸಿಐ ಮಾಜಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಹೃದಯಾಘಾತದಿಂದ ಸಾವು
Assault case in Bhadravati: Accused Mubarak arrested
Comments are closed.