Praveen Nettaru funeral : ಪಂಚಭೂತಗಳಲ್ಲಿ ಪ್ರವೀಣ್​ ನೆಟ್ಟಾರು ಲೀನ : ಕೇಸರಿ ಕಾರ್ಯಕರ್ತನಿಗೆ ಕಣ್ಣೀರ ವಿದಾಯ

ಮಂಗಳೂರು : Praveen Nettaru funeral : ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಪ್ರವೀಣ್​​ ನೆಟ್ಟಾರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಸುಳ್ಯ ತಾಲೂಕಿನ ಬೆಳ್ಳಾರೆ ಬಳಿಯ ನೆಟ್ಟಾರು ಗ್ರಾಮದಲ್ಲಿರುವ ಪ್ರವೀಣ್​ ನಿವಾಸದ ಸಮೀಪದಲ್ಲಿಯೇ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ. ಪ್ರವೀಣ್​ ನೆಟ್ಟಾರು ಮೃತದೇಹವನ್ನು ಕಂಡು ಪತ್ನಿ ನೂತನಾ ನೆಟ್ಟಾರು ಹಾಗೂ ಅವರ ತಾಯಿ ಗೋಳಾಡಿದ ರೀತಿ ಮನಕಲುಕುವಂತಿತ್ತು. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತ ಅಂತ್ಯಕ್ರಿಯೆಯ ವೇಳೆ ಸಂಪೂರ್ಣ ಗ್ರಾಮವೇ ಕಣ್ಣೀರಿನ ವಿದಾಯವನ್ನು ಹೇಳಿದೆ.

ಬಿಲ್ಲವ ಸಂಪ್ರದಾಯದಂತೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ. ಪ್ರವೀಣ್​ ನೆಟ್ಟಾರು ಸೋದರಮಾವ ಸೀನಪ್ಪ ಪೂಜಾರಿ ಹಾಗೂ ಕೋಕೇಶ್​ ಚಿತೆಗೆ ಅಗ್ನಿಸ್ಪರ್ಶವನ್ನು ಮಾಡಿದರು. ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಹಿಂದೂ ಪರ ಸಂಘಟನೆಗಳು 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುವ ಭರವಸೆಯನ್ನು ನೀಡಿವೆ.

ಧರ್ಮ ಹಾಗೂ ಜಾತಿಯ ಹೆಸರಿನಲ್ಲಿ ದ್ವೇಷವನ್ನು ಕಟ್ಟಿಕೊಳ್ಳುವವರಿಗೆ ಪ್ರವೀಣ್​ ನೆಟ್ಟಾರು ಸಾವು ಮತ್ತೊಂದು ಪಾಠವಾಗಿದೆ. ನಿನ್ನೆ ರಾತ್ರಿ ಸುಮಾರಿಗೆ ಕೋಳಿ ಅಂಗಡಿಯ ಬಾಗಿಲನ್ನು ಮುಚ್ಚಿ ಮನೆಗೆ ಹೊರಡಲು ತಯಾರಾಗಿದ್ದ ಪ್ರವೀಣ್​ ಮೇಲೆ ದಾಳಿ ನಡೆಸಿದ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಬಳಿಕ ತಲವಾರ್​ನಿಂದ ಪ್ರವೀಣ್​ ಕುತ್ತಿಗೆಗೆ ಇರಿದು ಎಸ್ಕೇಪ್​ ಆಗಿದ್ದರು. ರಕ್ತದ ಮಡುವಿನಲ್ಲಿ ಮಲಗಿದ್ದ ಪ್ರವೀಣ್​​ರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬಳಿಕ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಅಲ್ಲಿಂದ ಮೆರವಣಿಗೆ ಮೂಲಕ ಬೆಳ್ಳಾರೆಗೆ ಮೃತದೇಹವನ್ನು ತಂದು ಬಳಿಕ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ಅಂತಿಮ ದರ್ಶನದ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ಬಿಜೆಪಿ ನಾಯಕರ ಮೇಲೆ ತಮ್ಮ ಆಕ್ರೋಶವನ್ನು ಹೊರ ಹಾಕಿದ ಘಟನೆಗಳು ನಡೆದವು. ಸಚಿವರಾದ ಸುನೀಲ್​ ಕುಮಾರ್​ ಹಾಗೂ ಎಸ್​. ಅಂಗಾರ ಹಿಂದೂ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೇ ತಲೆ ತಗ್ಗಿಸಿದರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹಿಂದೂ ಕಾರ್ಯಕರ್ತರ ಮುತ್ತಿಗೆ ಎದುರಿಸುವಂತಾಗಿತ್ತು. ಪ್ರವೀಣ್​ ಸಾವಿನಿಂದ ಆಕ್ರೋಶಗೊಂಡಿರುವ ಅನೇಕ ಹಿಂದೂ ಪರ ಸಂಘಟನಾ ಕಾರ್ಯಕರ್ತರು ಇಂದು ಸಂಘಟನೆಗಳಿಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಇದನ್ನು ಓದಿ : Rahul Dravid: “ರಾಹುಲ್ ದ್ರಾವಿಡ್ ಅಲ್ಲ ರಾಹುಲ್ ‘ಡೇವಿಡ್’..” ದಿ ಗ್ರೇಟ್ ವಾಲ್ ಬಿಚ್ಚಿಟ್ಟ “ಹೆಸರು” ರಹಸ್ಯ

ಇದನ್ನೂ ಓದಿ : Praveen Nettaru’s murder case: ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ : ಹಿಂದೂ ಕಾರ್ಯಕರ್ತರಿಂದ ನಳೀನ್​ ಕುಮಾರ್​ ಕಟೀಲ್​ ವಾಹನ ಮುತ್ತಿಗೆ

BJP worker Praveen Nettaru funeral

Comments are closed.