ಬುಧವಾರ, ಏಪ್ರಿಲ್ 30, 2025
Homedistrict Newsಕರಾವಳಿಯಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆ : ಶೀತಗಾಳಿಯಿಂದ ಹೆಚ್ಚುತ್ತಿದೆ ಕೊರೊನಾ ಆತಂಕ...

ಕರಾವಳಿಯಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆ : ಶೀತಗಾಳಿಯಿಂದ ಹೆಚ್ಚುತ್ತಿದೆ ಕೊರೊನಾ ಆತಂಕ !

- Advertisement -

ಮಂಗಳೂರು/ಉಡುಪಿ : ಕರಾವಳಿಯ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆಯಿರುವುದರಿಂದಾಗಿ ಭಾರೀ ಪ್ರಮಾಣದಲ್ಲಿ ಮಳೆ ಬೀಸಲಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಅಧಿಕವಾಗಿದ್ರೆ, ಮಲೆನಾಡಿನ ಭಾಗಗಳಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗುವ ಆತಂಕ ಎದುರಾಗಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆಯ ಮಾಜಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ ಮಳೆ ಹೆಚ್ಚುವುದರಿಂದ ಶೀತಗಾಳಿ ಬೀಸಲಿದೆ. ಶೀತಗಾಳಿ ಬೀಸುವುದರಿಂದ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನದಲ್ಲಿ ಕೊರೊನಾ ವೈರಸ್ ಬಹುಬೇಗನೆ ಹರಡಲಿದೆ. ಹೀಗಾಗಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ತಜ್ಞರು ತಿಳಿಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular